ಕಾಂಗ್ರೆಸ್ ಅಭ್ಯರ್ಥಿಗೆ 90 ಸಾವಿರ ರೂ. ಹಣ ನೀಡಿದ ಗ್ರಾಮಸ್ಥರು

Public TV
0 Min Read

ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿ ಹೆಚ್.ಬಿ ಮಂಜಪ್ಪ ಅವರಿಗೆ ಗ್ರಾಮಸ್ಥರು 90 ಸಾವಿರ ರೂ. ಹಣ ದೇಣಿಗೆ ನೀಡಿದ್ದಾರೆ.

ದಾವಣಗೆರೆ ತಾಲೂಕಿನ ಬಾಡ ಗ್ರಾಮದ ಕಾರ್ಯಕರ್ತರು ಮೈತ್ರಿ ಅಭ್ಯರ್ಥಿ ಹೆಚ್. ಬಿ ಮಂಜಪ್ಪ ಅವರಿಗೆ ದೇಣಿಗೆ ನೀಡಿದ್ದಾರೆ. ಹೆಚ್. ಬಿ ಮಂಜಪ್ಪ ಗ್ರಾಮದಲ್ಲಿ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಕಾಂಗ್ರೆಸ್ ಕಾರ್ಯಕರ್ತರು ದೇಣಿಗೆ ನೀಡಿದ್ದಾರೆ.

ಕಾಂಗ್ರೆಸ್ ಅಭ್ಯರ್ಥಿ ರೈತ ಕುಟುಂಬದಿಂದ ಬಂದಿದ್ದಾರೆ. ಅವರಿಗೆ ಪ್ರಚಾರಕ್ಕೆ ಹಣ ಇಲ್ಲ. ಹೀಗಾಗಿ ಪ್ರಚಾರಕ್ಕೆ ಹೋದ ಕಡೆ ಗ್ರಾಮಸ್ಥರು ಮಂಜಪ್ಪ ಅವರಿಗೆ ಹಣ ನೀಡುತ್ತಿದ್ದಾರೆ. ಈಗಾಗಲೇ ಗ್ರಾಮಸ್ಥರು ಹಾಗೂ ಕಾರ್ಯಕರ್ತರು ಲಕ್ಷಾಂತರ ರೂ. ಹಣ ದೇಣಿಗೆ ನೀಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *