ದೇಶದ ಪರಿಸ್ಥಿತಿ ನೋಡಿದ್ರೆ ಯುದ್ಧ ಮಾಡೋದು ಶ್ರೇಷ್ಠ ಅಲ್ಲ: ವಿನೋದ್ ರಾಜ್

By
1 Min Read

ಕಾಶ್ಮೀರದಲ್ಲಿ ನಡೆದ ಭಯೋತ್ಪಾದಕರ ದಾಳಿ ಬಗ್ಗೆ ವಿನೋದ್ ರಾಜ್ (Vinod Raj) ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದೇಶದ ಪರಿಸ್ಥಿತಿ ನೋಡಿದ್ರೆ, ಯುದ್ಧ ಮಾಡೋದು ಶ್ರೇಷ್ಠ ಅಲ್ಲ ಅಂತ ಅನಿಸುತ್ತದೆ ಎಂದು ಉಗ್ರರ ದಾಳಿ ಬಗ್ಗೆ ವಿನೋದ್ ರಾಜ್ ಹೇಳಿದ್ದಾರೆ. ಇದನ್ನೂ ಓದಿ:ಪಹಲ್ಗಾಮ್‌ನಲ್ಲಿ ತುಂಬಾ ಕ್ರೂರವಾಗಿ ಸಾಯಿಸಿದ್ದಾರೆ: ಉಗ್ರರ ದಾಳಿ ಬಗ್ಗೆ ರಾಗಿಣಿ ಕಿಡಿ

ನಮ್ಮ ವಿಶ್ವದಲ್ಲಿ ಇರೋದು ಒಂದೇ ಹಿಂದೂಸ್ಥಾನ. ನಮ್ಮ ಹಿಂದುಸ್ಥಾನದಲ್ಲಿ ನಮಗೇ ಸ್ಥಾನ ಇಲ್ಲ ಅನ್ನುವಂತಹ ಪರಿಸ್ಥಿತಿ ಎದುರಾಗಬಾರದು. ನಮ್ಮ ಸಂಸ್ಕೃತಿ, ಸಂಸ್ಕಾರ ಉಳಿಯಬೇಕು. ಅನುಕಂಪ, ವಾತ್ಸಲ್ಯ ಭಾರತ ಮಣ್ಣಿಗೆ ಮಾತ್ರ ಚೆನ್ನಾಗಿ ಗೊತ್ತಿದೆ. ಬೇರೆ ಮಣ್ಣಿಗೆ ಅದು ಗೊತ್ತಿಲ್ಲ. ದೇಶದ ಪರಿಸ್ಥಿತಿ ನೋಡಿದ್ರೆ, ಯುದ್ಧ ಮಾಡೋದು ಶ್ರೇಷ್ಠ ಅಲ್ಲ ಅಂತ ಅನಿಸುತ್ತದೆ. ಅದನ್ನು ಅಲ್ಲೇ ಸರಿ ಮಾಡಬೇಕು. ಈ ಸೆಕ್ಯೂರಿಟಿನ ನಾವೇ ಸರಿ ಮಾಡಿಕೊಳ್ಳಬೇಕು ಎಂದು ಅವರು ಮಾತನಾಡಿದ್ದಾರೆ. ಇದನ್ನೂ ಓದಿ: ‘ತಾಂಡೇಲ್’ ಸಕ್ಸಸ್ ಬಳಿಕ ಹೊಸ ಸಿನಿಮಾ ಘೋಷಿಸಿದ ನಾಗಚೈತನ್ಯ

ಏ.22ರಂದು ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ 26 ಮಂದಿ ಬಲಿಯಾಗಿದ್ದಾರೆ. ಇನ್ನೂ ಹಲವರು ಗಾಯಗೊಂಡಿದ್ದಾರೆ. ಅಂದಹಾಗೆ, ಸಂತ್ರಸ್ಥರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 10 ಲಕ್ಷ ರೂ. ಘೋಷಿಸಿದ್ದಾರೆ.

Share This Article