ಒತ್ತಾಯಕ್ಕೆ ಮಣಿದು ಕೊಹ್ಲಿ ನಾಯಕತ್ವ ತೊರೆದರು: ಶೋಯೆಬ್‌ ಅಖ್ತರ್‌

Public TV
1 Min Read

ನವದೆಹಲಿ: ಭಾರತ ಕ್ರಿಕೆಟ್‌ ತಂಡದ ನಾಯಕತ್ವ ತೊರೆಯಲು ವಿರಾಟ್‌ ಕೊಹ್ಲಿ ಅವರನ್ನು ಒತ್ತಾಯಿಸಲಾಗಿತ್ತು ಎಂದು ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಶೋಯೆಬ್‌ ಅಖ್ತರ್‌ ಹೇಳಿದ್ದಾರೆ.

ನಾಯಕತ್ವ ತೊರೆಯಲು ಕೊಹ್ಲಿಗೆ ಇಷ್ಟವಿರಲಿಲ್ಲ. ಬಲವಂತದಿಂದ ಅವರನ್ನು ನಾಯಕತ್ವದಿಂದ ಕೆಳಗಿಳಿಸಲಾಗಿದೆ. ಇದು ಕೊಹ್ಲಿಗೆ ಒಳ್ಳೆಯ ಸಮಯವಲ್ಲ. ಆದರೂ ತನ್ನ ಸಾಮರ್ಥ್ಯವನ್ನು ಸಾಬೀತುಪಡಿಸಬೇಕಾಗಿದೆ. ಕೊಹ್ಲಿ ಶ್ರೇಷ್ಠ ವ್ಯಕ್ತಿ ಮತ್ತು ಉತ್ತಮ ಕ್ರಿಕೆಟಿಗ. ವಿಶ್ವದ ಇತರ ಆಟಗಾರರಿಗಿಂತ ಹೆಚ್ಚಿನ ಸಾಧನೆ ಮಾಡಿದ್ದಾರೆ ಎಂದು ಅಖ್ತರ್‌ ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಕೊಹ್ಲಿಗೆ ಶೋಕಾಸ್ ನೋಟಿಸ್ ನೀಡಿಲ್ಲ: ಗಂಗೂಲಿ

ಇನ್ನೊಬ್ಬರ ನಾಯಕತ್ವದಲ್ಲೂ ಕೊಹ್ಲಿ ಆಟಗಾರರಾಗಿ ಮುಂದುವರಿಯುತ್ತಾರೆ. ಆಟದಲ್ಲಿ ಫಾರ್ಮ್‌ ಆಗಿದ್ದವರು ಕೆಲವೊಮ್ಮೆ ತೊಂದರೆ ಅನುಭವಿಸಬೇಕಾಗುತ್ತದೆ. ಈಗಿನ ಸಂದರ್ಭದ ಕುರಿತು ಯಾರ ಬಗ್ಗೆಯೂ ಕಹಿ ಭಾವನೆ ಹೊಂದದೇ, ಯಾವುದನ್ನೂ ಮನಸ್ಸಿನಲ್ಲಿ ಇಟ್ಟುಕೊಳ್ಳದೇ ಮುಂದೆ ಸಾಗಿ. ಎಲ್ಲರನ್ನೂ ಕ್ಷಮಿಸಿ, ಮುಂದೆ ಸಾಗಿರಿ ಎಂದು ತಿಳಿಸಿದ್ದಾರೆ.

ಭಾರತ ಕ್ರಿಕೆಟ್‌ ಟೆಸ್ಟ್‌ ಮುಂದಿನ ನಾಯಕನ ಕುರಿತು ಮಾತನಾಡಿದ ಅವರು, ಈ ಬಗ್ಗೆ ಬಿಸಿಸಿಐ ಉತ್ತಮ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ನನಗೆ ತಿಳಿದಿದೆ ಎಂದಿದ್ದಾರೆ. ಇದನ್ನೂ ಓದಿ: ಪಂತ್ ಸಿಕ್ಸರ್‌ಗೆ ಕೊಹ್ಲಿ ಡ್ಯಾನ್ಸ್ – ವೀಡಿಯೋ ವೈರಲ್

ಕಳೆದ ವರ್ಷ ಕೊಹ್ಲಿ, ಟಿ20 ನಾಯಕತ್ವದಿಂದ ಕೆಳಗಿಳಿದಿದ್ದರು. ನಂತರ ಕಳೆದ ವಾರ ಭಾರತ ಟೆಸ್ಟ್‌ ನಾಯಕತ್ವದಿಂದಲೂ ಹೊರನಡೆದರು.

Share This Article
Leave a Comment

Leave a Reply

Your email address will not be published. Required fields are marked *