ಚುನಾವಣೆಯಲ್ಲಿ ತಮ್ಮ ಹೆಸರು ಬಳಸಿಕೊಂಡ ರಾಜಕೀಯ ಪಕ್ಷಕ್ಕೆ ತಿರುಗೇಟು ಕೊಟ್ಟ ಸೆಹ್ವಾಗ್

Public TV
1 Min Read

ಜೈಪುರ: ರಾಜಸ್ಥಾನ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಹೆಸರು ಬಳಕೆ ಮಾಡಿ ಪ್ರಚಾರ ಪಡೆಯುತ್ತಿದ್ದ ಸ್ಥಳೀಯ ರಾಜಕೀಯ ಪಕ್ಷಕ್ಕೆ ಟೀಂ ಇಂಡಿಯಾ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್ ತಿರುಗೇಟು ನೀಡಿದ್ದು, ಇಂತಹ ಸುಳ್ಳು ಪ್ರಚಾರಕ್ಕೆ ಮೋಸ ಹೋಗದಂತೆ ಜನರಲ್ಲಿ ಮನವಿ ಮಾಡಿದ್ದಾರೆ.

ರಾಜಸ್ಥಾನದ ಪ್ರಾದೇಶಿಕ ಪಕ್ಷವಾದ ರಾಷ್ಟ್ರಿಯ ಲೋಕತಾಂತ್ರಿಕ್ ಪಕ್ಷ ಸ್ಥಳೀಯ ಪತ್ರಿಕೆಗಳಲ್ಲಿ ಜಾಹೀರಾತು ನೀಡಿ ತಮ್ಮ ಪ್ರಚಾರ ಸಭೆಯಲ್ಲಿ ಸೆಹ್ವಾಗ್ ಕಾರ್ಯಕರ್ತರನ್ನು ಮಾತನಾಡಲಿದ್ದಾರೆ ಎಂದು ತಿಳಿಸಿತ್ತು. ಅಲ್ಲದೇ ಜಾಹೀರಾತು ಪ್ರತಿಯಲ್ಲಿ ಪಕ್ಷದ ಚಿಹ್ನೆಯಾದ ಬಾಟಲ್ ಹಾಗೂ ನಾಯಕರ ಫೋಟೋವನ್ನು ಪ್ರಕಟಿಸಿತ್ತು.

ಪತ್ರಿಕೆಯಲ್ಲಿ ಪ್ರಕಟವಾದ ಜಾಹೀರಾತಿನ ಫೋಟೋವನ್ನು ತಮ್ಮ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದು, ನಾನು ದುಬೈನಲ್ಲಿದ್ದೇನೆ. ಯಾವುದೇ ರಾಜಕೀಯ ಪಕ್ಷದೊಂದಿಗೆ ಮಾತುಕತೆ ನಡೆಸಿಲ್ಲ. ಅದರೂ ಯಾವುದೇ ನಾಚಿಕೆ ಇಲ್ಲದೆ ಪ್ರಚಾರಕ್ಕಾಗಿ ಇಂತಹ ಸುಳ್ಳು ಹೇಳುವ ಮೂಲಕ ಜನರಿಗೆ ಮೋಸ ಮಾಡುತ್ತಿದ್ದಾರೆ. ಇಂತಹ ವ್ಯಕ್ತಿಗಳು ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ಎಷ್ಟು ಮೋಸ ಮಾಡಬಹುದು. ಅದ್ದರಿಂದ ಮೋಸಗಾರರು ಮತ್ತು ಸುಳ್ಳುಗಾರರಗಿಂತ ಉತ್ತಮರನ್ನು ಆಯ್ಕೆ ಮಾಡಿ ಎಂದು ತಿಳಿಸಿದ್ದಾರೆ.

ವೀರೇಂದ್ರ ಸೆಹ್ವಾಗ್ ಸದ್ಯ ದುಬೈನಲ್ಲಿ ನಡೆಯುತ್ತಿರುವ ಟಿ10 ಲೀಗ್ ನಲ್ಲಿ ಭಾಗವಹಿಸಿದ್ದು, ಮರಾಠ ಅರೇಬಿಯನ್ಸ್ ತಂಡದ ಬ್ಯಾಟಿಂಗ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಮರಾಠ ಅರೇಬಿಯನ್ಸ್ ತಂಡದ ಪರವೇ ಸೆಹ್ವಾಗ್ ಆಡಿದ್ದರು. ಕಳೆದ ಐಪಿಎಲ್ ಟೂರ್ನಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಮೆಂಟರ್ ಆಗಿದ್ದ ಸೆಹ್ವಾಗ್, 2019ರ ಆವೃತ್ತಿಗೆ ತಂಡದಿಂದ ಹೊರ ನಡೆದಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *