ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಹೊರಲು ಸಿದ್ಧರಾದ ವಿಶಾಲ್ – ಅಪ್ಪು ಪತ್ನಿ ಅಶ್ವಿನಿ ಬಳಿ ಕೋರಿಕೆ

Public TV
1 Min Read

ಬೆಂಗಳೂರು: ಮೈಸೂರಿನ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಹೊರಲು ತಮಿಳು ನಟ ವಿಶಾಲ್ ಸಿದ್ಧರಾಗಿದ್ದಾರೆ. ಇಂದು ದಿ. ನಟ ಪುನೀತ್ ರಾಜ್‍ಕುಮಾರ್ ಮನೆಗೆ ಆಗಮಿಸಿದ ವಿಶಾಲ್, ಪುನೀತ್ ಪತ್ನಿ ಅಶ್ವಿನಿ ಬಳಿ ಈ ಬಗ್ಗೆ ಮನವಿ ಮಾಡಿಕೊಂಡರು.

ನಿನ್ನೆ ಶಿವರಾಜ್ ಕುಮಾರ್ ಜೊತೆ ಮಾತನಾಡಿದ್ದ ವಿಶಾಲ್ ಇಂದು ಪುನೀತ್ ಮನೆಗೆ ಆಗಮಿಸಿ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಬಗ್ಗೆ ಅಶ್ವಿನಿ ಜೊತೆ ಪ್ರಸ್ತಾಪ ಮಾಡಿ ಅನುಮತಿ ಕೇಳಿದರು. ಕೆಲವೇ ದಿನಗಳಲ್ಲಿ ಈ ಬಗ್ಗೆ ತಿಳಿಸುವುದಾಗಿ ಅಶ್ವಿನಿ ಭರವಸೆ ನೀಡಿದರು. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

1,800 ವಿದ್ಯಾರ್ಥಿಗಳ ಜವಾಬ್ದಾರಿ ಬಗ್ಗೆ ವಿಶಾಲ್, ಅಶ್ವಿನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಶಿವಣ್ಣ ಬಳಿಯೂ ಈ ಬಗ್ಗೆ ಚರ್ಚೆ ನಡೆಸಿದರು. ಈ ಮೊದಲು ಅಪ್ಪು ಸಮಾಧಿ ಬಳಿ ತೆರಳಿದ ವಿಶಾಲ್ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ತಾನು ನೆಟ್ಟ ಗಿಡಕ್ಕೆ ಪುನೀತ್ ರಾಜ್ ಕುಮಾರ್ ಅಂತ ಹೆಸರಿಟ್ಟ ವಿಶಾಲ್

ಪುನೀತ್ ನಿಧನರಾದ ಬಳಿಕ ಈ ಬಗ್ಗೆ ಮಾತನಾಡಿದ ವಿಶಾಲ್, ಅಪ್ಪು 1,800 ಮಕ್ಕಳಿಗೆ ಉಚಿತ ಶಿಕ್ಷಣ, ಅನಾಥಶ್ರಮ, ವೃದ್ಧಾಶ್ರಮ ನಡೆಸುವುದರ ಜೊತೆಗೆ ತಮ್ಮ ಸಾವಿನ ಬಳಿಕವೂ ಕಣ್ಣುಗಳನ್ನು ದಾನ ಮಾಡಿದ್ದಾರೆ. ಇದನ್ನೆಲ್ಲ ನೆನೆಸಿಕೊಳ್ಳುವಾಗ, ಪುನೀತ್ ಇಲ್ಲ ಅನ್ನೋದನ್ನು ನಂಬಲು ಆಗುತ್ತಿಲ್ಲ. ಪುನೀತ್ ಅಂತಹ ಬಹುಮುಖ ನಟನನ್ನು ನಾವು ಕಳೆದುಕೊಂಡಿದ್ದೇವೆ. ಪುನೀತ್‍ನನ್ನು ನೋಡಿದಾಗ, ಪುನೀತ್‍ನನ್ನು ನೆನಪಿಸಿಕೊಂಡಾಗ ನನ್ನ ಮನಸ್ಸಿಗೆ ಒಂದು ವಿಷಯ ಬಂತು. ನಿನ್ನ ಗೆಳೆಯನಾಗಿ ಮಾತು ಕೊಡುತ್ತಿದ್ದೇನೆ. ಆ 1,800 ಮಕ್ಕಳಿಗೆ ನಾನು ವಿದ್ಯಾಭ್ಯಾಸ ಕೊಡಿಸುತ್ತೇನೆ. ಮುಂದಿನ ವರ್ಷದಿಂದ ನಿಮ್ಮ ಫೌಂಡೇಷನ್, ನಿಮ್ಮ ಸಮಾಜಸೇವೆಯನ್ನು ನಾನು ಮುಂದುವರೆಸುತ್ತೇನೆ ಅಂತ ಭರವಸೆ ನೀಡಿದ್ದರು.  ಇದನ್ನೂ ಓದಿ:  ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

Share This Article
Leave a Comment

Leave a Reply

Your email address will not be published. Required fields are marked *