ಅಂಬೇಡ್ಕರ್, ಸಂವಿಧಾನ ನೆನೆದು ಭಾವುಕರಾದ ಕಾಗೇರಿ

Public TV
1 Min Read

ಕೋಲಾರ: ಸಂವಿಧಾನವನ್ನು (Constitution) ಅಂಬೇಡ್ಕರ್ (B.R Ambedkar) ಅವರು ಬಿಟ್ಟು ಬೇರೆಯವರು ಬರೆದಿದ್ರೆ, ಅದು ಕೇವಲ ಅಕ್ಷರ ಜೋಡಣೆಯಾಗುತ್ತಿತ್ತು ಎಂದು ಅಂಬೇಡ್ಕರ್ ನೆನೆದು ಸ್ಪೀಕರ್ ವಿಶ್ವೇಶ್ವರ ಹೆಗಡೆ (Vishweshwar Hegde Kageri) ಕಾಗೇರಿ ಭಾವುಕರಾದರು.

ಕೋಲಾರದಲ್ಲಿ (Kolara) ಹಮ್ಮಿಕೊಂಡಿದ್ದ ಚುನಾವಣಾ ವ್ಯವಸ್ಥೆಯಲ್ಲಿ ಸುಧಾರಣೆ ಅಗತ್ಯತೆ ಕುರಿತು ಸಂವಾದ ಕಾರ್ಯಕ್ರಮಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಸಂವಿಧಾನ ಬರೆಯದಿದ್ದರೆ ಅದು ಕೇವಲ ಸಂವಿಧಾನ ಶಬ್ದಗಳ ಜೋಡಣೆ ಹಾಗೂ ವಾಕ್ಯಗಳು ಜೋಡಣೆಯಾಗಿರುತ್ತಿತ್ತು. ಅಂಬೇಡ್ಕರ್ ಶೋಷಣೆಯ ಜೀವನಾನುಭವದ ಆಧಾರದ ಮೇಲೆ ಸಂವಿಧಾನ ರಚನೆ ಮಾಡಲು ಕಾರಣಕರ್ತರಾಗಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಬಿಜೆಪಿ ದೂರು ದಾಖಲು

ಸಂವಿಧಾನದಲ್ಲಿ ಜೀವನಾನುಭವ, ಸಮಾಜದ ಸ್ಥಿತಿಗತಿಗಳ ಅವಲೋಕನವಿದೆ, ಭವಿಷ್ಯದಲ್ಲಿ ಎಲ್ಲವನ್ನೂ ಸರಿಮಾಡುತ್ತೇನೆ ಎಂಬುವ ದೂರದೃಷ್ಟಿಕೋನವಿದೆ ಆ ಕಾರಣದಿಂದ ಅದೊಂದು ಶ್ರೇಷ್ಠ ಸಂವಿಧಾನವಾಗಿ ಇವತ್ತಿಗೂ ಇದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಯಡಿಯೂರಪ್ಪನವ್ರ ಬಚ್ಚಾ ಹೇಳಿಕೆಗೆ ಸಿದ್ದರಾಮಯ್ಯ ತಿರುಗೇಟು

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *