ಶೃತಿ, ಅರ್ಜುನ್ ಸರ್ಜಾ ಸಂಧಾನ ವಿಫಲ- ಕಾನೂನು ಹೋರಾಟಕ್ಕೆ ಇಬ್ಬರಿಂದಲೂ ಸಿದ್ಧತೆ

Public TV
1 Min Read

ಬೆಂಗಳೂರು: ಬಹುಭಾಷಾ ನಟ ಅರ್ಜುನ್ ಸರ್ಜಾ ಹಾಗೂ ಶೃತಿ ಹರಿಹರನ್ ನಡುವಿನ ಹೋರಾಟ ಈಗ ಕಾನೂನಾತ್ಮಕ ರೂಪ ಪಡೆದುಕೊಂಡಿದೆ. ಗುರುವಾರ ಫಿಲಂ ಚೇಂಬರ್‍ನಲ್ಲಿ ಸಂಧಾನ ಸಭೆ ಮುರಿದು ಬಿದ್ದಿದ್ದರಿಂದ ಇಬ್ಬರು ಕಾನೂನು ಹೋರಾಟದ ಮೊರೆ ಹೋಗಿದ್ದಾರೆ.

ನಿನ್ನೆ ಅರ್ಜುನ್ ಸರ್ಜಾ ಕೋರ್ಟ್ ನಲ್ಲಿ ಮಾನನಷ್ಟ ಮೊಕದ್ದಮ್ಮೆ ಕೇಸ್ ದಾಖಲಿಸಿದ್ದಾರೆ. ಅಲ್ಲದೇ, ಇಂದು ಚೆನ್ನೈ, ಹೈದ್ರಾಬಾದ್ ನಲ್ಲಿ ಮಾನನಷ್ಟ ಮೊಕದ್ದಮ್ಮೆ ಫೈಲ್ ಮಾಡಲು ಸಿದ್ಧತೆ ನಡೆಸಿದ್ದಾರೆ. ಮತ್ತೊಂದೆಡೆ ಚೆನ್ನೈ, ಹೈದ್ರಾಬಾದ್ ನಲ್ಲೂ ಜಾಲತಾಣಗಳಲ್ಲಿ ಅರ್ಜುನ್  ಸರ್ಜಾ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾರೆ ಅಂತ ಸೈಬರ್ ಕ್ರೈಂಗೆ ದೂರು ಕೊಡಲು ಚಿಂತನೆ ನಡೆಸಿದ್ದಾರೆ. ಇದನ್ನೂ ಓದಿ: ಪ್ರಾಬ್ಲಂ ಆಗಿದ್ದು ನನ್ಗೆ, ನಾನ್ಯಾಕೆ ಕ್ಷಮೆ ಕೇಳಲಿ: ಶೃತಿ ಹರಿಹರನ್

ಇದೆಲ್ಲದರ ನಡುವೆ ಶೃತಿ ಹರಿಹರನ್ ಸಹ ಇಂದು ಕೋರ್ಟ್ ಮೊರೆ ಹೋಗುವ ಸಾಧ್ಯತೆ ಇದೆ. ಇಂದು ಮೆಯೋಹಾಲ್ ಕೋರ್ಟ್ ನಲ್ಲಿ ಅರ್ಜುನ್ ಸರ್ಜಾ ಸಲ್ಲಿಸಿರೋ ಅರ್ಜಿ ವಿಚಾರಣೆ ನಡೆಯಲಿದೆ. ಕೋರ್ಟ್ ಬೆಳವಣಿಗೆ ನೋಡಿಕೊಂಡು ಶೃತಿ ಹರಿಹರನ್ ಸಹ ದೂರು ಕೊಡಲು ನಿರ್ಧರಿಸಿದ್ದಾರೆ. ಅರ್ಜುನ್ ಸರ್ಜಾ ವಿರುದ್ಧ ಶೃತಿ ಹರಿಹರನ್ ಕ್ರಿಮಿನಲ್ ಕೇಸ್ ದಾಖಲಿಸುವ ಸಾಧ್ಯತೆ ಇದೆ. ಇದನ್ನೂ ಓದಿ: ಸಂಧಾನ ಇಲ್ಲವೇ ಇಲ್ಲ, ಕೋರ್ಟ್ ಗೆ ಹೋಗ್ತಿನಿ: ಅರ್ಜುನ್ ಸರ್ಜಾ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=RKPY3g4jWRM

https://www.youtube.com/watch?v=Mud4GP9t0ik

Share This Article
Leave a Comment

Leave a Reply

Your email address will not be published. Required fields are marked *