ರಜೆ ಮೇಲೆ ಊರಿಗೆ ಬಂದಿದ್ದ ಯೋಧ ಅಪಘಾತಕ್ಕೆ ಬಲಿ

Public TV
1 Min Read

ಚಿಕ್ಕೋಡಿ/ಬೆಳಗಾವಿ: ಟ್ರಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿಯಾದ ಪರಿಣಾಮ ರಜೆಯ ಮೇಲೆ ಊರಿಗೆ ಬಂದಿದ್ದ ಯೋಧರೊಬ್ಬರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.

ನಾಗರಮುನ್ನೋಳಿ ಗ್ರಾಮ ನಿವಾಸಿ ಸಿಕಂದರ್ ಮುಲ್ತಾನಿ (28) ಮೃತ ಯೋಧ. ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿ ಮೇಲೆ ಈ ಘಟನೆ ನಡೆದಿದೆ. ಕಳೆದ 9 ವರ್ಷಗಳಿಂದ ಸಿಕಂದರ್ ಮುಲ್ತಾನಿ ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ ಆಫ್ ಸೆಂಟರ್ ಪಂಜಾಬ್ ನಲ್ಲಿ ಸೇವೆ ಸಲ್ಲಿಸುತ್ತಿದ್ದರು.

ಸಿಕಂದರ್ ಮುಲ್ತಾನಿ 40 ದಿನ ರಜೆ ಪಡೆದು ಊರಿಗೆ ಬಂದಿದ್ದರು. ಆದರೆ ಶುಕ್ರವಾರ ನಾಗರಮುನ್ನೋಳಿ ಗ್ರಾಮದಿಂದ ಪಕ್ಕದ ಗ್ರಾಮದಲ್ಲಿ ನಡೆಯುತ್ತಿದ್ದ ಜಾತ್ರೆಗೆ ಹೋಗಿದ್ದರು. ತಡರಾತ್ರಿ ಮನೆಗೆ ಹಿಂದಿರುಗಿ ವಾಪಸ್ ಬರುವಾಗ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ವಾಹನವನ್ನು ತಪ್ಪಿಸಲು ಹೋಗಿ ಟ್ರಾಕ್ಟರ್ ಹಿಂಬದಿಗೆ ಡಿಕ್ಕಿ ಹೊಡೆದಿದ್ದಾರೆ. ಪರಿಣಾಮ ಸಿಕಂದರ್ ಮುಲ್ತಾನಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಮಾಹಿತಿ ಸ್ಥಳಕ್ಕೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯೋಧ ಅವರಿಗೆ ಮದುವೆಯಾಗಿ ಇಬ್ಬರು ಮಕ್ಕಳಿದ್ದಾರೆ. ಈ ಘಟನೆ ಚಿಕ್ಕೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *