ಆಗಸ್ಟ್ 15ರ ಸಂಭ್ರಮಕ್ಕೆ ದೆಹಲಿಯ ಕೆಂಪುಕೋಟೆ ಸಜ್ಜು- 2,500 ಲ್ಯಾಂಪ್ಸ್ ಗಳನ್ನು ಬಳಸಿ ದೀಪಾಲಂಕಾರ

Public TV
1 Min Read

ನವೆದೆಹಲಿ: ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಕ್ಕೆ ದೆಹಲಿಯ ಕೆಂಪುಕೋಟೆ ಸಜ್ಜಾಗಿದ್ದು, ಶುಕ್ರವಾರ ರಾತ್ರಿ ಪ್ರಾಯೋಗಿಕವಾಗಿ ನಡೆದ ಬೆಳಕಿನ ಸಂಭ್ರಮಕ್ಕೆ ಸಾಂಸ್ಕೃತಿಕ ರಾಜ್ಯ ಸಚಿವ ಮಹೇಶ್ ಶರ್ಮಾ ಸಾಕ್ಷಿಯಾದರು.

17ನೇ ಶತಮಾನದ ಮೊಗಲ್ ಸಾಮ್ರಾಜ್ಯದಲ್ಲಿ ನಿರ್ಮಾಣವಾದ ಕೆಂಪುಕೋಟೆಗೆ 2,500 ಲ್ಯಾಂಪ್ಸ್ ಗಳನ್ನು ಬಳಸಿ ದೀಪಾಲಂಕಾರ ಮಾಡಲಾಗಿದ್ದು, ನೋಡುಗರ ಕಣ್ಮನ ಸೆಳೆಯುತ್ತಿದೆ. ಪುರಾತತ್ವ ಇಲಾಖೆ ನೀಡಿರುವ ಮಾಹಿತಿ ಮೇರೆಗೆ 100ಕ್ಕೂ ಹೆಚ್ಚು ಸ್ಮಾರಕಗಳಿಗೆ ದೀಪಾಲಂಕಾರ ಮಾಡಲು ಉದ್ದೇಶಿಸಲಾಗಿದೆ.

ಇದೇ ವೇಳೆ ಮಹೇಶ್ ಶರ್ಮಾ ಮಾತನಾಡಿ, ಇದು ಸ್ಥಳೀಯರು ಹೆಮ್ಮೆ ಪಡುವುದಕ್ಕೆ ಮಾತ್ರವಲ್ಲ ರಾತ್ರಿ ಪ್ರವಾಸೋದ್ಯಮವನ್ನು ದೊಡ್ಡ ಮಟ್ಟದಲ್ಲಿ ಉತ್ತೇಜಿಸಲು ಸಹಾಯ ಮಾಡುತ್ತೇವೆ. ಈ ಎಲ್‍ಇಡಿ ದೀಪಾಲಂಕಾರಕ್ಕೆ 3 ಕೋಟಿ ವೆಚ್ಚದಲ್ಲಿ 2 ತಿಂಗಳ ಸಮಯವಕಾಶ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *