ಮೈಸೂರು: ಕಬಿನಿ ಜಲಾಶಯದ (Kabini Dam) ಒಳ ಹರಿವು ಹೆಚ್ಚಾದ ಹಿನ್ನೆಲೆ ಭಾರೀ ಪ್ರಮಾಣದ ನೀರನ್ನು ನದಿಗೆ ಹರಿಸುತ್ತಿರುವ ಪರಿಣಾಮ ಕಪಿಲಾ ನದಿ (Kapila River) ಉಕ್ಕಿ ಭತ್ತದ ಬೆಳೆ (Paddy Crop) ಸಂಪೂರ್ಣ ಮುಳುಗಡೆಯಾಗಿದೆ.
ಕೇರಳದ ವಯನಾಡಿನಲ್ಲಿ ಮಳೆಯ ಅಬ್ಬರ ಹೆಚ್ಚಾದ ಪರಿಣಾಮ ಮೈಸೂರು (Mysuru) ಜಿಲ್ಲೆಯ ಹೆಚ್ಡಿ ಕೋಟೆಯ ಬೀಚನಹಳ್ಳಿಯಲ್ಲಿನ ಕಬಿನಿ ಜಲಾಶಯಕ್ಕೆ ಒಳ ಹರಿವು ಹೆಚ್ಚಾಗಿದೆ. ಹೀಗಾಗಿ ಜಲಾಶಯದಿಂದ ಭಾರೀ ಪ್ರಮಾಣದ ನೀರು ನದಿಗೆ ಹರಿಸಲಾಗುತ್ತಿದ್ದು, ಕಪಿಲಾ ನದಿ ಉಕ್ಕಿ ಭತ್ತದ ಬೆಳೆ ನಾಶವಾಗಿದೆ. ನಂಜನಗೂಡು ತಾಲೂಕು ಹುಲ್ಲಳ್ಳಿ ಹಾಗೂ ರಾಂಪುರ ನಾಲೆಗಳಲ್ಲಿ ಹೆಚ್ಚಿದ ನೀರಿನಿಂದ ಭತ್ತದ ಬೆಳೆ ನದಿ ನೀರಿನಲ್ಲಿ ಮುಳುಗಡೆ ಆಗಿದೆ. ಇದನ್ನೂ ಓದಿ: ಇಂದು ಸುರ್ಜೇವಾಲ ಜೊತೆ ಒನ್ ಟು ಒನ್ ಮೀಟಿಂಗ್ – 8 ಶಾಸಕರಿಗೆ ಬುಲಾವ್
ಬೊಕ್ಕಹಳ್ಳಿ ಹದಿನಾರು ಮೂಡಹಳ್ಳಿ, ಅಲತ್ತೂರು, ನಗರ್ಲೆ, ಕುಪ್ಪರವಳ್ಳಿ, ಹೊಸಕೋಟೆ, ಸುತ್ತೂರು, ಬೀಳುಗಲಿ, ತಾಯೂರು, ಹಾರೋಪುರ ಗ್ರಾಮಗಳಲ್ಲಿ ಬೆಳೆ ನಾಶ ಉಂಟಾಗಿದೆ. ರೈತರು ಬೆಳೆದ ನೂರಾರು ಎಕರೆ ಭತ್ತದ ಫಸಲು ನಾಶವಾಗಿದೆ. ಇದನ್ನೂ ಓದಿ: ಮೊದಲ ಬಾರಿಗೆ ಜೂನ್ ತಿಂಗಳಲ್ಲಿ KRS ಭರ್ತಿ – ಇಂದು ಬಾಗಿನ ಅರ್ಪಿಸಿ ಹೊಸ ದಾಖಲೆ ಬರೆಯಲಿದ್ದಾರೆ ಸಿಎಂ