ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ, ಸರ್ಕಾರ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧ- ಡಿಸಿ ತಮ್ಮಣ್ಣ

Public TV
1 Min Read

ಗದಗ: ನಾವೆಲ್ಲ ಒಂದೇ ತಾಯಿ ಮಕ್ಕಳಿದ್ದಂತೆ. ನಮ್ಮ ಸರ್ಕಾರವೂ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ ಎಂದು ಸಾರಿಗೆ ಸಚಿವ ಡಿಸಿ ತಮ್ಮಣ್ಣ ಹೇಳಿದ್ದಾರೆ.

ನಗರದ ನೂತನ ಬಸ್ ನಿಲ್ದಾಣದಲ್ಲಿ ಗ್ರಂಥಾಲಯ ಹಾಗೂ ಶುದ್ಧನೀರಿನ ಘಟಕವನ್ನು ಉದ್ಘಾಟಿಸಿದ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಮ್ಮ ಸರ್ಕಾರವೂ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ. ಈ ವಿಚಾರದಲ್ಲಿ ಮುಖ್ಯಮಂತ್ರಿಗಳು ಆಡಿದ ಆವೇಶದ ಮಾತುಗಳನ್ನು ಪ್ರತಿಪಕ್ಷಗಳು ರಾಜಕೀಯಕ್ಕೆ ಬಳಸಬಾರದು. ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿರುವುದನ್ನು ಶೀಘ್ರದಲ್ಲೇ ಸರಿ ಪಡಿಸಲಾಗುವುದು ಎಂದರು.

ಅಖಂಡ ಕರ್ನಾಟಕ ಏಕೀಕರಣಕ್ಕೆ ಆಲೂರು ವೆಂಕಟರಾಯರು ಅಡಿಪಾಯ ಹಾಕಿದ್ದು, ಅವರ ಆಶಯದಂತೆ ರಾಜ್ಯದ ಅಭಿವೃದ್ಧಿ ಮಾಡಲಾಗುವುದು. ಉತ್ತರ ಕರ್ನಾಟಕ ಭಾಗದಲ್ಲಿ ಪ್ರತ್ಯೇಕ ರಾಜ್ಯದ ಹೋರಾಟದ ಕೂಗು ಸರಿಯಲ್ಲ ಎಂದು ಹೇಳಿದರು.

ಉತ್ತರ ಕರ್ನಾಟಕ ಗಂಡುಮೆಟ್ಟಿದ ನಾಡು. ಗೋಕಾಕ್ ಚಳುವಳಿಯ ಮೂಲಕ ಅಖಂಡ ಕರ್ನಾಟಕದ ಹೋರಾಟ ಆರಂಭವಾಯ್ತು. ರಾಜ್ಯದ ನಾಲ್ಕು ಸಾರಿಗೆ ವಿಭಾಗಗಳಲ್ಲಿ ಯಾವುದೇ ತಾರತಮ್ಯ ಇಲ್ಲ. ಆಡಳಿತದ ದೃಷ್ಟಿಯಿಂದ ಈ ಹಿಂದೆ ವಿಭಾಗಗಳನ್ನು ಮಾಡಿರುವುದು ಸರಿಯಾಗಿದೆ ಎಂದು ಸಚಿವರು ತಿಳಿಸಿದ್ರು.

Share This Article
Leave a Comment

Leave a Reply

Your email address will not be published. Required fields are marked *