ನಾವೆಲ್ಲಾ ಡಮ್ಮಿ, ವಿಂಗ್ ಕಮಾಂಡರ್ ಅಭಿನಂದನ್ ರಿಯಲ್ ಹೀರೋ: ದರ್ಶನ್

Public TV
1 Min Read

ಮೈಸೂರು: ವಿಂಗ್ ಕಮಾಂಡರ್ ಅಭಿನಂದನ್ ಅವರು ರಿಯಲ್ ಹೀರೋ, ನಾವೆಲ್ಲಾ ಡಮ್ಮಿ ಎಂದು ಮೈಸೂರಿನಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹೇಳಿದ್ದಾರೆ.

ಮೈಸೂರಿನಲ್ಲಿ ಛಾಯಾಚಿತ್ರ ಪ್ರದರ್ಶನದಲ್ಲಿ ಭಾಗಿಯಾಗಿರುವ ನಟ ದರ್ಶನ್ ಅವರು ಮಾಧ್ಯಮದೊಂದಿಗೆ ಮಾತನಾಡಿ, ವಿಂಗ್ ಕಮಾಂಡರ್ ಅಭಿನಂದನ್ ಅವರು ರಿಯಲ್ ಹೀರೋ, ನಾವೆಲ್ಲಾ ಡಮ್ಮಿ. ಇನ್ನೊಬ್ಬರ ನೆಲದಲ್ಲಿ ನಿಂತು ಅಷ್ಟು ಧೈರ್ಯವಾಗಿರುವ ಅವರ ಗಟ್ಸ್ ಗ್ರೇಟ್ ಹಾಗೂ ಅವರಿಗೆ ಹ್ಯಾಟ್ಸಾಫ್ ಹೇಳುತ್ತೇನೆ ಎಂದು ದರ್ಶನ್ ಹೇಳಿದ್ದಾರೆ.

ಇದಾದ ಬಳಿಕ ಛಾಯಾಚಿತ್ರದ ಪ್ರದರ್ಶನದ ಬಗ್ಗೆ ಮಾತನಾಡಿದ ದರ್ಶನ್ ಅವರು ಒಂದು ಒಳ್ಳೆಯ ಉದ್ದೇಶದಿಂದ ಈ ಪ್ರದರ್ಶನ ಆಯೋಜಿಸಿದ್ದೇವೆ. ಇದರಲ್ಲಿ ಬಂದ ಹಣವನ್ನು ಅರಣ್ಯ ಸಂರಕ್ಷಣೆಗೆ ಖರ್ಚು ಮಾಡುತ್ತೇನೆ ಎಂದು ತಿಳಿಸಿದರು.

ನನಗೆ ಛಾಯಾಚಿತ್ರದ ಬಗ್ಗೆ ಅರಿವೇ ಇರಲಿಲ್ಲ. ನನ್ನ ಸ್ನೇಹಿತರು ಇದರ ಹುಚ್ಚು ಹಿಡಿಸಿದರು. ಬಳಿಕ ನಾನು ಕಬಿನಿ, ಕೇರಳ ಸೇರಿದಂತೆ ಹಲವೆಡೆ ಓಡಾಡಿ ಈ ಚಿತ್ರಗಳನ್ನು ಸೆರೆ ಹಿಡಿದಿದ್ದೇನೆ. ಕಾಡಿನಲ್ಲಿ ಪ್ರಾಣಿಗಳನ್ನು ನೋಡುವುದೇ ಒಂದು ಚಾಲೆಂಜ್. ಆ ಅನುಭವದ ಮುಂದೆ ಬೇರೆ ಏನು ಇಲ್ಲ. ಅಪರೂಪದ ಕ್ಷಣಗಳಿಗೆ ಕಾಡಿನ ಪ್ರವಾಸ ಸಾಕ್ಷಿಯಾಗಿದೆ ಎಂದರು.

ಅಲ್ಲದೇ ಮನಸ್ಸಿಗೆ ನೆಮ್ಮದಿ ಸಿಗುತ್ತೆ, ತಾಳ್ಮೆ ಕಲಿಯಬಹುದು. ಎಲ್ಲರು ಕಾಡು ಉಳಿಸಿ ಇಲ್ಲದಿದ್ದರೆ, ಮುಂದೆ ಪ್ರಾಣಿಗಳನ್ನು ಫೋಟೋದಲ್ಲೇ ನೋಡಬೇಕಾಗುತ್ತೆ. ಅದಕ್ಕಾದರೂ ಕಾಡನ್ನು ಸಂರಕ್ಷಿಸೋಣ ಎಂದು ಮನವಿ ಮಾಡಿಕೊಂಡರು.

ಚಿತ್ರ ಬಿಡುಗಡೆ ಬಗ್ಗೆ ಮಾತನಾಡಿ, “ಯಜಮಾನ ಚಿತ್ರ ರಿಲೀಸ್ ಆಗಿದೆ. ನಾನು ಈಗ ರಿಸಲ್ಟ್‍ಗಾಗಿ ಕಾಯುತ್ತಿದ್ದೇನೆ. ಯಜಮಾನ ಈಗಷ್ಟೇ ಬಿಡುಗಡೆಯಾಗಿದ್ದು, ಎಲ್ಲರು ಸಿನಿಮಾ ನೋಡುತ್ತಿದ್ದಾರೆ. ಒಂದೊಂದೆ ಕಡೆಯಿಂದ ಫೋನ್ ಬರುತ್ತಿದೆ. ಇನ್ನೆರಡು ದಿನ ಆದ ಮೇಲೆ ಚಿತ್ರದ ಬಗ್ಗೆ ಮಾತನಾಡುತ್ತೇನೆ. ಮೊದಲು ಎಲ್ಲರು ಚಿತ್ರ ನೋಡಿ ಎಂದು ದರ್ಶನ್ ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿಕೊಂಡರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *