ಚಲನಚಿತ್ರ ವಾಣಿಜ್ಯ ಮಂಡಳಿ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ: ಶಿವಣ್ಣ

Public TV
1 Min Read

ಮೈಸೂರು: ಚಲನಚಿತ್ರ ವಾಣಿಜ್ಯ ಮಂಡಳಿ ಕೈಗೊಳ್ಳುವ ನಿರ್ಧಾರಕ್ಕೆ ನಾವು ಬದ್ಧ ಎಂದು ನಟ ಶಿವರಾಜ್‍ಕುಮಾರ್ ತಿಳಿಸಿದರು.

ಡಿ.31ರಂದು ನಡೆಯುವ ಬಂದ್ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಯಾವತ್ತಿದ್ದರೂ ಕನ್ನಡ ನೆಲ, ಜಲ, ಭಾಷೆಯ ರಕ್ಷಣೆ ಮಾಡಲು ಬದ್ಧರಾಗಿರುತ್ತೇವೆ. ಅದು ಅಲ್ಲದೇ ಈ ಕುರಿತು ಸರ್ಕಾರ ತೀರ್ಮಾನ ತೆಗೆದುಕೊಂಡಿರುವುದು ನಮಗೆ ಸಂತಸ ತಂದಿದೆ ಎಂದರು.

ಚೇಂಬರ್ ಏನು ಹೇಳುತ್ತೆ ಅದೇ ರೀತಿ ನಾವು ನಡೆದುಕೊಳ್ಳುತ್ತೇವೆ. ನಾವು ಯೋಚಿಸಿ ನಿರ್ಧಾರವನ್ನು ತೆಗೆದುಕೊಳ್ಳಬೇಕು. ಡಿ.31 ಅಲ್ಲಿ ನಮ್ಮ ಕನ್ನಡದಲ್ಲಿ ಮೂರು ಸಿನಿಮಾಗಳು ಬಿಡುಗಡೆಯಾಗುತ್ತಿದೆ. ಅದಕ್ಕೆ ನಮ್ಮ ಕನ್ನಡ ಸಿನಿಮಾಗಳಿಗೆ ಯಾವ ರೀತಿಯ ದ್ರೋಹ ಆಗಬಾರದು. ಈ ಒಂದು ಸಮಸ್ಯೆಯನ್ನು ನಾವು ಬಹಳ ಬುದ್ಧಿವಂತಿಕೆಯಿಂದ ಸರಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ:  ನಮಗೆ ನಷ್ಟ ಮಾಡಿಕೊಂಡು, ಇನ್ನೊಬ್ಬರ ಮೇಲೆ ಪ್ರತಿಭಟನೆ ಮಾಡಬಾರದು: ಯಶ್

ಈ ಕುರಿತು ಜವಾಬ್ದಾರಿಯನ್ನು ತೆಗೆದುಕೊಳ್ಳುವವರು ತುಂಬಾ ಜನ ಇದ್ದಾರೆ. ಈ ಕುರಿತು ಅವರು ನಿರ್ಧಾರವನ್ನು ತೆಗೆದುಕೊಳ್ಳುತ್ತಾರೆ. ಎಲ್ಲರಿಗೂ ಅವರ ಭಾಷೆ, ನಾಡಿನ ಮೇಲೆ ಪ್ರೀತಿ, ಗೌರವ ಇದ್ದೇ ಇರುತ್ತೆ. ನಾವೆಲ್ಲರೂ ಕನ್ನಡಿಗರು ಎಂದರು.

Share This Article
Leave a Comment

Leave a Reply

Your email address will not be published. Required fields are marked *