ನಮಗೆ ರಾಮಮಂದಿರದ ಅಗತ್ಯವಿಲ್ಲ, ಮೂಲ ಸೌಕರ್ಯ ನೀಡಿ – ನಟ ಚೇತನ್

Public TV
1 Min Read

ರಾಮನಗರ: ನಮಗೆ ರಾಮಮಂದಿರದ (Ram Mandir) ಅಗತ್ಯವಿಲ್ಲ. ದೇವಸ್ಥಾನಗಳು ನಮ್ಮ ಬದುಕನ್ನ ಕಟ್ಟಿಕೊಡುವುದಿಲ್ಲ. ಅದರ ಬದಲು ಜನರಿಗೆ ಮೂಲ ಸೌಕರ್ಯ ಒದಗಿಸಿ ಎಂದು ನಟ, ಚಿಂತಕ ಚೇತನ್ (Chetan Ahimsa) ಒತ್ತಾಯಿಸಿದ್ದಾರೆ.

ರಾಮನಗರ (Ramanagara) ತಾಲೂಕಿನ ಕೂನಮುದ್ದಹಳ್ಳಿಯ ದಲಿತ (Dalits) ಕಾಲೋನಿಯಲ್ಲಿಂದು ಮೂಲ ಸೌಕರ್ಯ ಕಲ್ಪಿಸುವಂತೆ ಆಗ್ರಹಿಸಿ ನಟ ಚೇತನ್ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಸಲಾಯಿತು. ಇದನ್ನೂ ಓದಿ: ಹೂಡಿಕೆದಾರರ ಹಿತಾಸಕ್ತಿಯೇ ನನಗೆ ಮುಖ್ಯ – 20,000 ಕೋಟಿ ಮೌಲ್ಯದ FPO ಹಿಂಪಡೆದ ಬಳಿಕ ಅದಾನಿ ಮೊದಲ ಪ್ರತಿಕ್ರಿಯೆ

ಈ ವೇಳೆ ಮಾತನಾಡಿದ ಅವರು, ರಾಜಕೀಯ ಪಕ್ಷಗಳು ಚುನಾವಣೆಗಾಗಿ ಗಿಮಿಕ್ ಮಾಡ್ತಿದ್ದಾರೆ. ನಮಗೆ ರಾಮಮಂದಿರದ ಅವಶ್ಯಕತೆಯಿಲ್ಲ. ಇದನ್ನ ದಕ್ಷಿಣ ಅಯೋಧ್ಯೆ ಮಾಡಲು ಸರ್ಕಾರ (Government) ಕೂಡ ಅನುಮತಿ ನೀಡಬಾರದು. ಇದೆಲ್ಲವನ್ನು ಬಿಟ್ಟು ಮೊದಲು ಜನರಿಗೆ ಮೂಲ ಸೌಕರ್ಯ ಕಲ್ಪಿಸಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಕೇಂದ್ರ ಬಜೆಟ್ (Union Budget 2023) ವಿಚಾರವಾಗಿ ಮಾತನಾಡಿ, ಇದು ಶ್ರೀಮಂತರ ಪರವಾದ ಬಜೆಟ್. ಈ ಬಜೆಟ್‌ನಿಂದ ಜನಸಾಮಾನ್ಯರಿಗೆ ಯಾವುದೆ ಅನುಕೂಲವಾಗಿಲ್ಲ. ತೆರಿಗೆ ವಿನಾಯಿತಿಯಿಂದ ಬಡವರಿಗೆ ಉಪಯೋಗವಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: 50 ಸಾವಿರ ವರ್ಷಕ್ಕೊಮ್ಮೆ ಗೋಚರಿಸುವ ವಿಸ್ಮಯ – ಬೆಂಗಳೂರಲ್ಲಿ ಗೋಚರಿಸಲಿಲ್ಲ ಹಸಿರು ಧೂಮಕೇತು

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ವಿಚಾರ ಕುರಿತು ಪ್ರತಿಕ್ರಿಯಿಸಿ, ನಾನು ಯಾವುದೇ ಕಾರಣಕ್ಕೂ ಚುನಾವಣೆಯಲ್ಲಿ ಸ್ಪರ್ಧಿಸಲ್ಲ. ಸಮಾನತೆ ಪರವಾದ ಹೋರಾಟವಷ್ಟೇ ನಮ್ಮ ಕೆಲಸ. ಬುದ್ಧ, ಬಸವ, ಅಂಬೇಡ್ಕರ್ ತತ್ವಕ್ಕೆ ನಮ್ಮ ಬೆಂಬಲ ಎಂದು ನುಡಿದಿದ್ದಾರೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *