ಅಂಬರೀಶ್‌ಗೆ ಟಿಕೆಟ್ ಕೊಟ್ಟಿದ್ದೀವಿ, ಅವರು ನಿಂತ್ಕೋಬೇಕು ಅಷ್ಟೇ: ಸಿಎಂ ಸಿದ್ದರಾಮಯ್ಯ

Public TV
1 Min Read

ಮೈಸೂರು: ನಾನು ಅಂಬರೀಶ್ ಅವರನ್ನು ಭೇಟಿ ಮಾಡುವುದಕ್ಕೆ ಹೋಗಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ರೆಬಲ್ ಸ್ಟಾರ್ ಅಂಬರೀಶ್‍ಗೆ ಮಂಡ್ಯದ ಬಿ ಫಾರಂ ಕೊಟ್ಟಿದ್ದೀವಿ. ಅವರು ನಿಂತುಕೊಳ್ಳಬೇಕು ಅಷ್ಟೇ. ಅಲ್ಲದೇ ಸ್ಪರ್ಧಿಸೋದು ಬಿಡೋದು ಅವರಿಗೆ ಬಿಟ್ಟಿದ್ದು. ಅಂಬರೀಶ್ ಬಿ ಫಾರಂ ರಿಸೀವ್ ಮಾಡ್ತಿಲ್ಲ ಎಂಬ ವಿಚಾರ ನನಗೆ ಗೊತ್ತಿಲ್ಲ. ಪಕ್ಷದ ಅಧ್ಯಕ್ಷರು ಬಿ ಫಾರಂ ಕೊಡ್ತಾರೆ ಹೊರತು ನಾನಲ್ಲ ಅಂತಾ ಅಂದ್ರು.

ಇದೇ ವೇಳೆ ಅಂಬರೀಶ್‍ರನ್ನು ಭೇಟಿ ಮಾಡುತ್ತೀರಿ ಎಂಬ ವಿಚಾರದ ಬಗ್ಗೆ ಪ್ರತಿಕ್ರಿಯಿಸಿ, ನಾನು ಅಂಬರೀಶ್ ಭೇಟಿ ಮಾಡುವುದಿಲ್ಲ. ಯಾರೋ ತಪ್ಪಾಗಿ ಮಾಹಿತಿ ನೀಡಿದ್ದಾರೆ ಎಂದು ಕೋಪದಿಂದ ಹೇಳಿದ್ರು.

Share This Article
Leave a Comment

Leave a Reply

Your email address will not be published. Required fields are marked *