ಕಾನೂನು ಕ್ರಮ ಕೈಗೊಳ್ಳುತ್ತೇವೆ: ಜಿ ಪರಮೇಶ್ವರ್

Public TV
1 Min Read

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡುತ್ತಿದ್ದು, ಒಂದೆಡೆ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಪ್ರಮಾನ ವಚನ ಸ್ವೀಕಾರ ಮಾಡಿದ್ದಾರೆ. ಇನ್ನೊಂದೆಡೆ ಜೆಡಿಎಸ್- ಕಾಂಗ್ರೆಸ್ ನಾಯಕರು ಪ್ರತಿಭಟನೆಗಿಳಿದಿದ್ದಾರೆ.

ಈ ಕುರಿತು ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್, ರಾಜ್ಯಪಾಲರು ಮತ್ತು ಸುಪ್ರೀಂ ಕೋರ್ಟ್ ನಡೆಯ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರು ಬಹುಮತ ಸಾಧಿಸಿದ್ದೇವೆ ಅಂತ ಹೇಳುತ್ತಿದ್ದಾರೆ. ನಮ್ಮಲ್ಲೂ ಎರಡು ಪಕ್ಷ ಸೇರಿದಾಗ ಸಂಖ್ಯಾಬಲ ಜಾಸ್ತಿಯಾಗುತ್ತದೆ. ಹೀಗಾಗಿ ಎರಡೂ ಪಕ್ಷದವರೂ ಕೂಡ ಲಿಖಿತ ಪತ್ರದ ಮೂಲಕ ತಿಳಿಸಿದ್ದೆವು. ಈ ವೇಳೆ ಸಂವಿಧಾನಾತ್ಮಕವಾಗಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಅಂತ ರಾಜ್ಯಪಾಲರು ನಮಗೆ ಆಶ್ವಾಸನೆ ಕೊಟ್ಟಿದ್ರು. ಆದ್ರೆ ಇದೀಗ ರಾಜ್ಯಪಾಲರು 104 ಜನ ಇದ್ರು ಕೂಡ ಯಡಿಯೂರಪ್ಪನವರಿಗೆ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ಮಾಡಿಕೊಟ್ಟಿದ್ದಾರೆ. ಹೀಗಾಗಿ ಜೆಡಿಎಸ್ ಹಾಗೂ ಕಾಂಗ್ರೆಸ್ ನವರು ಸೇರಿ ಪ್ರತಿಭಟನೆ ಕೈಗೊಳ್ಳುತ್ತೇವೆ. ಆ ಬಳಿಕ ನಾವು ಕಾನೂನಾತ್ಮಕವಾಗಿ ಹೋರಾಟಕ್ಕೆ ಕ್ರಮಕೈಗೊಳ್ಳುತ್ತೇವೆ.

ಅವರಿಗೆ 15 ದಿನ ಕಾಲಾವಕಾಶ ನೀಡಿದ್ದಾರೆ. ಈ 15 ದಿವಸದೊಳಗೆ ಅವರು ನಮ್ಮವರನ್ನು ಹಾಗೂ ನಮ್ಮ ಶಾಸಕರನ್ನು ಅವರು ಕರೆದುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ ಅಂತ ಅವರು ಹೇಳಿದ್ರು.

ಚುನಾವಣಾ ಫಲಿತಾಂಶಕ್ಕೂ ಮೊದಲೇ ತಾನೇ ಸಿಎಂ ಆಗುವುದು ಅಂತ ಹೇಳುತ್ತಿದ್ದ ಬಿಎಸ್‍ವೈ ಯಡಿಯೂರಪ್ಪ ಅವರು ಫಲಿತಾಂಶ ಹೊರಬಂದು ಬಿಜೆಪಿ ಬಹುಮತ ಗಳಿಸಿದ್ರೂ, ಜೆಡಿಎಸ್- ಕಾಂಗ್ರೆಸ್ ಮೈತ್ರಿಯ ಕಾರಣದಿಂದ ಸಾಧ್ಯವಾಗಿಲ್ಲ. ಆದ್ರೂ ಇಂದು ಬಿಎಸ್ ವೈ ಅವರು ಸಿಎಂ ಆಗಿ ಪ್ರಮಾಣ ವಚನ ಸ್ವೀಕಾರ ಮಾಡಿರುವುದು ಇದೀಗ ಕಾಂಗ್ರೆಸ್ಸಿಗೆ ಭಾರೀ ಹೊಡೆತವೇ ಬಿದ್ದಿದೆ.

Share This Article
Leave a Comment

Leave a Reply

Your email address will not be published. Required fields are marked *