ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ: ಬೊಮ್ಮಾಯಿ

Public TV
1 Min Read

ಉಡುಪಿ: ಲವ್ ಜಿಹಾದ್ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಸರ್ಕಾರದ 8 ವರ್ಷದ ಸಾಧನೆಗಳ ಬಗ್ಗೆ ಹೇಳಿದರು. ಈ ವೇಳೆ ಅವರು, ಲವ್ ಜಿಹಾದ್ ಪ್ರಕರಣಗಳು ಈಗ ಶುರುವಾದದ್ದು ಅಲ್ಲ. ಇದು ಹಿಂದಿನಿಂದಲೂ ಇತ್ತು. ಸರ್ಕಾರ ಈಗಾಗಲೇ ಇವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಂಡಿದೆ. ತಪ್ಪಿತಸ್ಥರನ್ನು ಹಾಗೆ ಸುಮ್ಮನೆ ಬಿಡುವ ಪ್ರಶ್ನೆಯೇ ಇಲ್ಲ. ಪೊಲೀಸರು ಅಂತಹವರ ಮೇಲೆ ಶಿಸ್ತು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು. ಇದನ್ನೂ ಓದಿ: ಪ್ರೇಮ ನಿವೇದನೆಯನ್ನ ಒಪ್ಪದ್ದಕ್ಕೆ 14 ಬಾರಿ ಇರಿದು ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ 

ಬಿ.ಆರ್.ಶೆಟ್ಟಿ ಆಸ್ಪತ್ರೆ ಉದ್ಯೋಗಿಗಳ ಸಂಬಳ ಸಮಸ್ಯೆಗಳ ಕುರಿತು ನನ್ನ ಗಮನಕ್ಕೆ ಬಂದಿದೆ. ಉದ್ಯೋಗಿಗಳ ಸಂಬಳವನ್ನು ಶೀಘ್ರ ಬಿಡುಗಡೆ ಮಾಡಿ ಅವರಿಗೆ ಪಾವತಿ ಮಾಡಲಾಗುವುದು ಎಂದು ಭರವಸೆ ಕೊಟ್ಟರು.

ಬಿಜೆಪಿ ಸರ್ಕಾರ ಬಂದರೆ ಲೋಕಾಯುಕ್ತವನ್ನು ಬಲಪಡಿಸುತ್ತವೆ ಎಂದು ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ಹೇಳಿದೆ. ಆದರೆ ಆ ಕಾರ್ಯ ಇನ್ನೂ ಆಗಿಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನಾತ್ಮಕವಾಗಿ ಎಸಿಬಿಯನ್ನು ಮತ್ತಷ್ಟು ಬಲಪಡಿಸುವ ಕೆಲಸ ಮಾಡಿದ್ದೇವೆ. ಲೋಕಾಯುಕ್ತ ಕೂಡ ತನ್ನ ವ್ಯಾಪ್ತಿಯಲ್ಲಿ ಕೆಲಸ ಮಾಡುತ್ತಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *