ವೀಕೆಂಡ್ ಕರ್ಫ್ಯೂ ಅಮಾನವೀಯ, ಇದೊಂದು ಅವೈಜ್ಞಾನಿಕ ಕ್ರಮ: ಎ.ಎಸ್.ಪೊನ್ನಣ್ಣ

By
1 Min Read

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವೀಕೆಂಡ್ ಕರ್ಫ್ಯೂ ಜಾರಿ ಮಾಡಿ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಅಮಾನವೀಯವಾಗಿದೆ. ಇದೊಂದು ಅವೈಜ್ಞಾನಿಕ ಕ್ರಮವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ನ ಕಾನೂನು ಘಟಕದ ಅಧ್ಯಕ್ಷ ಎ.ಎಸ್.ಪೊನ್ನಣ್ಣ ಟೀಕಿಸಿದರು.

ಕರ್ಫ್ಯೂ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊಡಗು ಜಿಲ್ಲೆಯಲ್ಲಿ ಈಗ ಕಾಫಿ ಬೆಳೆಗಾರರು ತಮ್ಮ ಫಸಲನ್ನು ಕಟಾವು ಮಾಡುವ ಸಮಯ. ಹಲವು ವರ್ಷಗಳಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಬೆಳೆಗಾರರು, ರೈತರ ಜೀವನೋಪಾಯಕ್ಕೆ ಮಾರಕವಾದಂತಹ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ. ಜಿಲ್ಲಾಧಿಕಾರಿ ಹಾಗೂ ರಾಜ್ಯ ಸರ್ಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ಕೃಷಿ ಚಟುವಟಿಕೆಗಳಿಗೆ ಅನ್ವಯ ಆಗದಂತೆ ಈ ಕೂಡಲೇ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಸಶಸ್ತ್ರಪಡೆಗಳಲ್ಲಿ ಮಹಿಳೆಯರಿಗೆ ಅವಕಾಶ ಹೆಚ್ಚಿಸಲು ನೂರು ಸೈನಿಕ ಶಾಲೆಗಳ ಸ್ಥಾಪನೆ: ರಾಜನಾಥ್ ಸಿಂಗ್

ಯಾವುದೇ ವೈಜ್ಞಾನಿಕ ಹಿನ್ನೆಲೆ ಇಲ್ಲದೆ ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಹೇರಿರುವುದು ಹಾಸ್ಯಾಸ್ಪದವಾದ ಕ್ರಮ. ಸರ್ಕಾರ ಮತ್ತು ಜಿಲ್ಲಾಧಿಕಾರಿಗಳು ತಮ್ಮ ವಿವೇಚನೆಯನ್ನು ಬಳಸಿ ಕಾನೂನನ್ನು ಜನರ ಪರವಾಗಿ ಅಳವಡಿಸಬೇಕೇ ಹೊರತು ಜನವಿರೋಧಿ ನೀತಿಗಳಿಗೋಸ್ಕರ ಅಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.

ಕೂಡಲೇ ಜಿಲ್ಲಾಧಿಕಾರಿಗಳು ಕೊಡಗಿನಲ್ಲಿ ಕಾಫಿ, ಕಾಳು ಮೆಣಸು ಹಾಗೂ ಇತರ ಯಾವುದೇ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗದಂತೆ ಆದೇಶವನ್ನು ಹೊರಡಿಸಿ. ಈ ವೀಕೆಂಡ್ ಕರ್ಫ್ಯೂವನ್ನು ಸಡಿಲಗೊಳಿಸಬೇಕು ಎಂದು ಕೇಳಿಕೊಂಡರು. ಇದನ್ನೂ ಓದಿ: ಅಧಿಕಾರದಲ್ಲಿದ್ದಾಗ ಕುಂಭಕರ್ಣ ನಿದ್ದೆ, ಈಗ ಮೇಕೆದಾಟು ಹೋರಾಟ: ಡಿಕೆಶಿಗೆ ಕಾರಜೋಳ ಟಾಂಗ್

ಯಾವುದೇ ಕಾನೂನಾತ್ಮಕವಾದಂತಹ ಕ್ರಮಗಳನ್ನು ಕೈಗೊಳ್ಳುವ ಮೊದಲು ಸರ್ಕಾರ ಹಾಗೂ ಜಿಲ್ಲಾಧಿಕಾರಿಗಳು ಈ ಒತ್ತಾಯವನ್ನು ಪರಿಗಣಿಸಬೇಕು. ಈ ಒತ್ತಾಯವನ್ನು ಜಿಲ್ಲಾಧಿಕಾರಿಗಳು ಸರ್ಕಾರಕ್ಕೆ ತಲುಪಿಸಿ ಬೆಳೆಗಾರರ ನೆರವಿಗೆ ಬರಬೇಕೆಂದು ಆಗ್ರಹಿಸಿದರು.

Share This Article
Leave a Comment

Leave a Reply

Your email address will not be published. Required fields are marked *