ನಾರಿಶಕ್ತಿ ಅಪಮಾನಗೊಳಿಸುವ ʻಸ್ತ್ರೀ ದ್ವೇಷಿʼಗಳಿರುವುದು ಬೇಸರ – ಶಾಮನೂರು ಶಿವಶಂಕರಪ್ಪ ವಿರುದ್ಧ ಸೈನಾ ನೆಹ್ವಾಲ್‌ ಕಿಡಿ

Public TV
2 Min Read

ನವದೆಹಲಿ: `ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ’ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ನಾಲಿಗೆ ಹರಿಬಿಟ್ಟಿದ್ದ ಶಾಸಕ ಶಾಮನೂರು ಶಿವಶಂಕರಪ್ಪ (Shamanur Shivashankarappa) ಅವರ ಹೇಳಿಕೆಗೆ ಬ್ಯಾಡ್ಮಿಂಟನ್‌ ತಾರೆ ಸೈನಾ ನೆಹ್ವಾಲ್‌ (Saina Nehwal) ಕಿಡಿ ಕಾರಿದ್ದಾರೆ. ತಮ್ಮ ಸೋಶಿಯಲ್‌ ಮೀಡಿಯಾ ಎಕ್ಸ್‌ ಮೂಲಕ ಪ್ರತಿಕ್ರಿಯೆ ನೀಡಿರುವ ಅವರು ಶಾಮನೂರು ಅವರನ್ನ ʻಸ್ತ್ರೀ ದ್ವೇಷಿʼ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಸೈನಾ ನೆಹ್ವಾಲ್‌ ಹೇಳಿದ್ದೇನು?
ಮಹಿಳೆಯನ್ನು ಅಡುಗೆ ಕೋಣೆಗೆ ಸೀಮಿತಗೊಳಿಸಬೇಕು ಅಂತಾ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಅವರು ಬಯಸಿದ್ದಾರೆ. ಆದ್ರೆ ಪ್ರತಿ ಮಹಿಳೆಯೂ ಹೋರಾಡುತ್ತಾಳೆ ಅನ್ನೋ ತತ್ವದಲ್ಲಿ ನಂಬಿಕೆಯಿಟ್ಟುರುವ ಪಕ್ಷದ ಅಭ್ಯರ್ಥಿಯಾಗಿ ಗಾಯತ್ರಿ (Gayatri Siddheshwara) ಅವರು ಕಣದಲ್ಲಿದ್ದಾರೆ. ಇದನ್ನೂ ಓದಿ: `ಕೈ’ಗೆ ಶಾಕ್‌ ಮೇಲೆ ಶಾಕ್‌; 1,800 ಕೋಟಿ ರೂ. ಡಿಮ್ಯಾಂಡ್‌ ನೋಟಿಸ್‌ ಬೆನ್ನಲ್ಲೇ ಐಟಿಯಿಂದ ಮತ್ತೆರಡು ನೋಟಿಸ್!

ನಾನು ಮೈದಾನದಲ್ಲಿ ಭಾರತಕ್ಕಾಗಿ ಪದಕಗಳನ್ನು ಗೆದ್ದಾಗ ನಾನು ಏನು ಮಾಡಬೇಕೆಂದು ಕಾಂಗ್ರೆಸ್ ಪಕ್ಷ ಆದ್ಯತೆ ನೀಡುತ್ತಿತ್ತು? ಎಲ್ಲಾ ಹುಡುಗಿಯರು ಮತ್ತು ಮಹಿಳೆಯರು ತಮಗೆ ಇಷ್ಟವಾದ ಯಾವುದೇ ಕ್ಷೇತ್ರದಲ್ಲಿ ದೊಡ್ಡದನ್ನು ಸಾಧಿಸಬೇಕು ಎಂದು ಕನಸು ಕಾಣುತ್ತಿರುವಾಗ ಹಾಗೆ ಏಕೆ ಹೇಳಬೇಕು? ಒಂದೆಡೆ ನಾವು ನಾರಿ ಶಕ್ತಿ ಕೋ ವಂದನ್ (ನಾರಿ ಶಕ್ತಿಗೆ ವಂದನೆ) ಮಾಡುತ್ತಿದ್ದೇವೆ. ನಮ್ಮ ಪ್ರಧಾನಿ ಮೋದಿಯವರ (PM Modi) ನೇತೃತ್ವದಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಇನ್ನೊಂದೆಡೆ, ನಾರಿ ಶಕ್ತಿಯನ್ನು ಅಪಮಾನಗೊಳಿಸುವ ಮತ್ತು ಸ್ತ್ರೀ ದ್ವೇಷದ ಜನ ಇರುವುದು ನಿಜಕ್ಕೂ ಅಸಮಾಧಾನ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ಗೆ ಮತ್ತೊಂದು ಶಾಕ್‌ – ‘ಕೈ’ ನಾಯಕನ ಸೊಸೆ ಬಿಜೆಪಿ ಸೇರ್ಪಡೆ

ಶಾಮನೂರು ಹೇಳಿದ್ದೇನು?
ದಾವಣಗೆರೆ ಬಂಟರ ಭವನದಲ್ಲಿ ನಡೆದ ಕಾಂಗ್ರೆಸ್‌ ಜನಪ್ರತಿನಿಧಿಗಳು, ಮುಖಂಡರ ಸಭೆಯಲ್ಲಿ ಶಾಮನೂರು ಶಿವಶಂಕರಪ್ಪ ಮಾತನಾಡಿ, ಮಾತನಾಡಲು ಬಾರದ ಇವರು ಅಡುಗೆ ಮಾಡೋದಕ್ಕೆ ಲಾಯಕ್ಕು. ಅವರಿಗೆ ಮಾತನಾಡುವ ಶಕ್ತಿ ಇಲ್ಲ ಎಂದು ಸಂಸದ ಸಿದ್ದೇಶ್ವರ್‌ ಪತ್ನಿ ವಿರುದ್ಧ ಶಾಸಕ ಶಾಮನೂರು ಶಿವಶಂಕರಪ್ಪ ನಾಲಿಗೆ ಹರಿಬಿಟ್ಟಿದ್ದರು. ಇದೇ ವೇಳೆ ವಿರೋಧ ಪಕ್ಷದವರು ಮೋದಿ.. ಮೋದಿ ಅಂತಾರೆ. ಆದರೆ ಮೋದಿ ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ? ನಮ್ಮ ರಾಜ್ಯಕ್ಕೆ ಬರಬೇಕಾದ ಹಣ ನೀಡದೇ ಅನ್ಯಾಯ ಮಾಡಿದ್ದಾರೆ ಎಂದು ಬಿಜೆಪಿ ವಿರುದ್ಧವೂ ವಾಗ್ದಾಳಿ ನಡೆಸಿದ್ದರು. ಸದ್ಯ ಶಾಮನೂರು ಶಿವಶಂಕರಪ್ಪ ಅವರ ಹೇಳಿಕೆಯನ್ನು ಖಂಡಿಸಿ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Share This Article