ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಇಟ್ಟ ಹೆಸರೇನು? ಆ ಹೆಸರಿನ ಅರ್ಥ ಏನು?

Public TV
1 Min Read

ಇಂದು ಬೆಂಗಳೂರಿನ ಜೆಪಿ ನಗರದ ವೆಂಕಟೇಶ್ವರ ದೇವಸ್ಥಾನದಲ್ಲಿ ನಟ, ಯುವರಾಜಕಾರಣಿ ನಿಖಿಲ್ ಕುಮಾರ್ ಸ್ವಾಮಿ ಪುತ್ರನಿಗೆ ಶಾಸ್ತ್ರೋಕ್ತವಾಗಿ ನಾಮಕರಣ ಶಾಸ್ತ್ರ ನಡೆಯುತ್ತಿದೆ. ಬೆಳಗ್ಗೆ 10.30 ರಿಂದ 12.20ರವರೆಗೂ ನಡೆಯುವ ಶುಭ ಲಗ್ನದಲ್ಲಿ ಮಗುವಿಗೆ ನಾಮಕರಣ ಮಾಡುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇದನ್ನೂ ಓದಿ: ಹೇಗಿದ್ದೀರಾ, ಚೆನ್ನಾಗಿದ್ದೀರಾ? ಎಂದು ಕೇಳುವುದನ್ನೇ ನಿಲ್ಲಿಸಿ ಬಿಟ್ಟಿದ್ದೆ : ಧ್ರುವ ಸರ್ಜಾ

ಪ್ರಪೌತ್ರ ಜನನ ಶಾಂತಿ, ನಾಮಕರಣ ಹಾಗೂ ಕನಕಾಭಿಷೇಕ ಕಾರ್ಯಕ್ರಮವನ್ನು ಇದೇ ಸಂದರ್ಭದಲ್ಲಿ ನಡೆಯುತ್ತಿದ್ದು, ದೊಡ್ಡ ಗೌಡರ ಕುಟುಂಬವು ಮೊಮ್ಮಗನಿಗೆ ಆವ್ಯನ್ ದೇವ್ ಎಂದು ಹೆಸರಿಡಲು ನಿರ್ಧರಿಸಿದ್ದಾರಂತೆ.  ನಿಖಿಲ್ ಮತ್ತು ರೇವತಿ ದಂಪತಿಯ ಈ ಮಗುವಿಗೆ ಈಗ ಒಂಬತ್ತು ತಿಂಗಳು. ಇದನ್ನೂ ಓದಿ: ಚಿರು ಮಗನನ್ನು ನಾನೇ ಲಾಂಚ್ ಮಾಡುತ್ತೇನೆ : ಅರ್ಜುನ್ ಸರ್ಜಾ

ಈ ಕಾರ್ಯಕ್ರಮಕ್ಕೆ ಕೇವಲ ಕುಟುಂಬಸ್ಥರಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಹಾಗಾಗಿ ದೇವೇಗೌಡರ ಕುಟುಂಬ ಮತ್ತು ಅವರ ಆಪ್ತರು ಮಾತ್ರ ಭಾಗಿಯಾಗಿದ್ದಾರೆ.  ಮಗು ನಾಮಕರಣಕ್ಕೆ ವಿವಿಧ ಹೂಗಳಿಂದ ಸಿಂಗಾರ ಗೊಂಡಿದ್ದು, ಬೆಳ್ಳಿ ತೊಟ್ಟಿಲಲ್ಲಿ ಮಗುವಿನ ನಾಮಕರಣ ಶಾಸ್ತ್ರ ನಡೆಯಲಿದೆ.

Share This Article
Leave a Comment

Leave a Reply

Your email address will not be published. Required fields are marked *