ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ – ಪೊಲೀಸರಿಂದ ಪುಂಡನಿಗೆ ದಂಡದ ರುಚಿ!

Public TV
1 Min Read

ಶಿವಮೊಗ್ಗ: ಸಾಗರ ತಾಲೂಕಿನ ಸಿಗಂದೂರು ಸೇತುವೆ (Sigandur Bridge) ಮೇಲೆ ದುಬಾರಿ ಬೈಕ್‌ನಲ್ಲಿ ವ್ಹೀಲಿಂಗ್ ಮಾಡಿದ ಪುಂಡನಿಗೆ ಪೊಲೀಸರು ದಂಡ ವಿಧಿಸಿ, ತಪ್ಪೊಪ್ಪಿಗೆ ಹೇಳಿಕೆ ಪಡೆದಿದ್ದಾರೆ.

ಆಗಸ್ಟ್‌ 15ರಂದು ಯುವಕ ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ಮಾಡಿದ್ದ. ಆತನ ಬೈಕ್‌ ಸ್ಟಂಟ್‌ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿತ್ತು. ಈ ಹಿನ್ನೆಲೆ ಗ್ರಾಮಾಂತರ ಠಾಣೆ ಪೊಲೀಸರು ಬೈಕ್‌ ಸವಾರನನ್ನು ಪತ್ತೆ ಹಚ್ಚಿ, ಆತನಿಗೆ 5000 ರೂ. ದಂಡ ವಿಧಿಸಿದ್ದಾರೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್‌ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ

ಯುವಕ ವಿಡಿಯೋ ಮೂಲಕ ನೀಡಿದ ತಪ್ಪೊಪ್ಪಿಗೆ ಹೇಳಿಕೆಯಲ್ಲಿ, ಇನ್ನುಮುಂದೆ ವ್ಹೀಲಿಂಗ್ ಮಾಡೋದಿಲ್ಲ. ಯಾರು ಈ ರೀತಿಯ ತಪ್ಪು ಮಾಡಬಾರದು ಎಂದು ಹೇಳಿದ್ದಾನೆ. ವ್ಹೀಲಿಂಗ್ ಮಾಡಿದ ಯುವಕನ ವಿರುದ್ಧ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಗಂದೂರು ಸೇತುವೆ ಲೋಕಾರ್ಪಣೆಗೊಳಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ

Share This Article