ವಾಕಿಂಗ್ ಹೊರಟವರ ಮೇಲೆ ಹರಿದ ಕಾರು- ಮೃತನ ಮಗನೆಂದು ನಂಬಿಸಿ ಮೊಬೈಲ್ ದೋಚಿದ ಕಿರಾತಕ

Public TV
1 Min Read

ಕಲಬುರಗಿ: ವಾಕಿಂಗ್ ಹೊರಟಿದ್ದ ಮೂವರು ವ್ಯಕ್ತಿಗಳ ಮೇಲೆ ಕಾರೊಂದು ಹರಿದ ಪರಿಣಾಮ ಓರ್ವ ಸಾವನ್ನಪ್ಪಿದ್ದು ಇನ್ನಿಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ಜಿಲ್ಲೆಯ ರಾಮಮಂದಿರ ಬಳಿ ಇಂದು ಬೆಳಗ್ಗೆ ನಡೆದಿದೆ.

ರಾಮಮಂದಿರ ಬಳಿ ಎಂದಿನಂತೆ ಮೂವರು ವ್ಯಕ್ತಿಗಳು ವಾಕಿಂಗ್ ತೆರಳಿದ್ದರು. ಈ ವೇಳೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಕಾರೊಂದು ಏಕಾಏಕಿ ಬಂದು ಮೂವರ ಮೇಲೆ ಹರಿದು ಹೋಗಿದೆ. ಅಪಘಾತದಲ್ಲಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರನ್ನು ಸ್ಥಳೀಯರು ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಕಾರು ಮೈಮೇಲೆ ಹರಿದ ಪರಿಣಾಮ ತೀವ್ರ ಗಾಯಗೊಂಡಿರುವ ಇಬ್ಬರ ಸ್ಥಿತಿಯೂ ಗಂಭೀರವಾಗಿದೆ. ಕಾರು ಚಾಲಕನಿಗೆ ಪೀಟ್ಸ್ ಬಂದು ವಾಹನ ಕಂಟ್ರೋಲ್ ತಪ್ಪಿದಕ್ಕೆ ಈ ದುರಂತ ಸಂಭವಿಸಿದೆ. ಹಾಗೆಯೇ ಗಾಯಾಳು ಹಾಗೂ ಮೃತನ ಬಗ್ಗೆ ಹೆಚ್ಚಿನ ಮಾಹಿತಿ ಇನ್ನೂ ತಿಳಿದುಬಂದಿಲ್ಲ.

ಈ ಸಾವು ನೋವಿನ ನಡುವೆಯೂ ಕಿರಾತಕನೊಬ್ಬ ಮೃತನ ಮಗ ಎಂದು ಸ್ಥಳೀಯರನ್ನು ನಂಬಿಸಿ ಅವರ ಬಳಿಯಿದ್ದ ಹಣ ಹಾಗೂ ಮೊಬೈಲ್ ದೋಚಿ ಪರಾರಿಯಾಗಿದ್ದಾನೆ. ಸಾವಿನ ಮನೆಯಲ್ಲೂ ಕಳ್ಳತನ ಮಾಡಿ ತನ್ನ ನೀಚ ಬುದ್ಧಿ ತೋರಿಸಿದ್ದಾನೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಸದ್ಯ ಪೊಲೀಸರು ಕಾರನ್ನು ಜಪ್ತಿ ಮಾಡಿ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ. ಕಲಬುರಗಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *