ಅಮೆರಿಕ-ಇರಾನ್‌ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯಾಹು 1 ಫೋನ್ ಕಾಲ್‌ ಎಲ್ಲವನ್ನ ಹಾಳುಮಾಡಿತು: ಇರಾನ್‌ ಹೊಸ ಬಾಂಬ್‌

2 Min Read

ಟೆಹ್ರಾನ್‌: ಅಮೆರಿಕ ಮತ್ತು ಇರಾನ್ ನಡುವೆ ಸಂಧಾನವಾಗಿ (US Iran Peace Talk) ಯುದ್ಧ ನಿಲ್ಲುತ್ತೆ, ಜಗತ್ತು ಶಾಂತಿಯಾಗುತ್ತೆ ಅಂತ ಕೋಟ್ಯಂತರ ಜನರು ಕನಸು ಕಂಡಿದ್ದರು. ಪಾಕಿಸ್ತಾನದ (Pakistan) ಇಸ್ಲಾಮಾಬಾದ್‌ನಲ್ಲಿ ನಡೆದ 21 ಗಂಟೆಗಳ ಮಾತುಕತೆ ವಿಫಲವಾಯಿತು.‌ ಈ ಬೆಳವಣಿಯ ಕೆಲ ಗಂಟೆಗಳ ನಂತರ ಇರಾನ್‌ ಮೊದಲ ಪ್ರತಿಕ್ರಿಯೆ ನೀಡಿದ್ದು, ಮಾತುಕತೆ ವಿಫಲವಾಗಲು ಇಸ್ರೇಲ್‌ ಪ್ರಧಾನಿ ಕಾರಣ ಎಂದು ಇರಾನ್‌ ಹೊಸ ಬಾಂಬ್‌ ಸಿಡಿಸಿದೆ.

ಅಮೆರಿಕ – ಇರಾನ್‌ ಮಾತುಕತೆಗಳ ಮಧ್ಯೆ ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು (Benjamin Netanyahu) ಅವರು ಅಮೆರಿಕದ ಉಪಾಧ್ಯಕ್ಷ ಜೆಡಿ ವ್ಯಾನ್ಸ್‌ಗೆ ಫೋನ್‌ ಕಾಲ್‌ ಮಾಡಿದ್ದರು. ಆ ಫೋನ್‌ ಕಾಲ್‌ ಬಳಿಕ ಮಾತುಕತೆ ಹಳಿತತಪ್ಪಿತು, ಅಮೆರಿಕ ಬಿಕ್ಕಟ್ಟಿನಲ್ಲಿ ಕಾಣುತ್ತಿದ್ದ ಪ್ರಗತಿಯನ್ನ ಹಾಳುಮಾಡಿತು ಎಂದು ಇರಾನ್‌ನ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಾಘ್ಚಿ (Seyed Abbas Araghchi) ತಮ್ಮ ಎಕ್ಸ್‌ ಪೋಸ್ಟ್‌ ನಲ್ಲಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಇರಾನ್‌ಗೆ ಸುಂಕ ಪಾವತಿಸುವ ಯಾವುದೇ ಹಡಗುಗಳನ್ನ ಬಿಡಲ್ಲ – ವಿಶ್ವಕ್ಕೆ ಟ್ರಂಪ್‌ ವಾರ್ನಿಂಗ್‌

ಯುದ್ಧದ ಮೂಲಕ ಸಾಧಿಸಲು ಸಾಧ್ಯವಾಗದ್ದನ್ನ ಮಾತುಕತೆಯ ಮೂಲಕ ಬಗೆಹರಿಸಿಕೊಳ್ಳಲು ಅಮೆರಿಕ ಪ್ರಯತ್ನಿಸಿತ್ತು. ಆದ್ರೆ ಸಭೆ ನಡೆಯುತ್ತಿದ್ದಾಗ ನೆತನ್ಯಾಹು, ವ್ಯಾನ್ಸ್‌ಗೆ (JD Vance) ಕರೆ ಮಾಡಿ, ಅಮೆರಿಕ-ಇರಾನ್‌ ಮಾತುಕತೆಗಳಿಂದ ಗಮನವನ್ನ ಇಸ್ರೇಲ್‌ ಹಿತಾಸಕ್ತಿಗಳತ್ತ ಸೆಳೆದರು. ಇದು ಒಪ್ಪಂದವನ್ನು ಹಾಳುಮಾಡಿತು ಎಂದು ದೂರಿದ್ದಾರೆ. ಇದನ್ನೂ ಓದಿ: ಟ್ರಂಪ್‌ ಎಚ್ಚರಿಕೆ ಬೆನ್ನಲ್ಲೇ ಹಾರ್ಮುಜ್ ದಾಟದೇ ಯೂಟರ್ನ್‌ ಹೊಡೆದ 2 ಪಾಕ್‌ ತೈಲ ಟ್ಯಾಂಕರ್‌ಗಳು

ಮುಂದುವರಿದು… ವ್ಯಾನ್ಸ್‌ ಇಸ್ಲಾಮಾಬಾದ್‌ನಿಂದ ನಿರ್ಗಮಿಸುವುದಕ್ಕೂ ಮುನ್ನ ನಡೆಸಿದ್ದ ಸುದ್ದಿಗೋಷ್ಠಿ ಅನಗತ್ಯವಾಗಿತ್ತು ಎಂದ ಅರಾಘ್ಚಿ, ಇರಾನ್ ತನ್ನ ರಾಷ್ಟ್ರದ ಹಿತಾಸಕ್ತಿ ಮತ್ತು ಸಾರ್ವಭೌಮತ್ವ ಕಾಪಾಡಲು ಸಿದ್ಧ ಮತ್ತು ಬದ್ಧವಾಗಿದೆ ಎಂದು ಪ್ರತಿಪಾದಿಸಿದ್ದಾರೆ.

Donald Trump Strait Of Hormuz

ನೆತನ್ಯಾಹು ಕರೆ ಬಗ್ಗೆ ಅಮೆರಿಕ ನಿರಾಕರಿಸಿಲ್ಲ
ಇನ್ನೂ ಸಂಧಾನ ಮಾತುಕತೆ ನಡುವೆ ನೆತನ್ಯಾಹು, ಜೆಡಿ ವ್ಯಾನ್ಸ್‌ಗೆ ಕರೆ ಮಾಡಿ ದಿಕ್ಕು ತಪ್ಪಿಸಿದ್ರು ಅನ್ನೋ ಇರಾನ್‌ ಆರೋಪದವನ್ನ ಅಮೆರಿಕ ಅಲ್ಲಗಳೆದಿಲ್ಲ, ಆದ್ರೆ ಇದು ಸತ್ಯ ಅಂತಲೂ ಒಪ್ಪಿಕೊಂಡಿಲ್ಲ. ತಕ್ಷಣಕ್ಕೆ ಪ್ರತಿಕ್ರಿಯೆ ಕಾಯ್ದಿರಿಸಿದೆ. ಇದನ್ನೂ ಓದಿ: ಇರಾನ್‌ ಜೊತೆಗಿನ ಮಾತುಕತೆ ವಿಫಲವಾದ ಬೆನ್ನಲ್ಲೇ ಕಚ್ಚಾ ತೈಲ ಬೆಲೆ ಶೇ.11 ರಷ್ಟು ಏರಿಕೆ

ಇನ್ನೂ ಮಾತುಕತೆ ವಿಫಲವಾದ ಬೆನ್ನಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹಾರ್ಮುಜ್‌ ಜಲಸಂಧಿಗೆ ದಿಗ್ಭಂಧನ ವಿಧಿಸುವಂತೆ ಯುಎಸ್‌ ನೌಕಾಪಡೆಗೆ ಸೂಚನೆ ನೀಡಿದ್ದಾರೆ. ಇರಾನ್‌ಗೆ ಅಕ್ರಮ ಸುಂಕ ಪಾವತಿಸುವ ಯಾವುದೇ ಹಡಗು ಹಾರ್ಮುಜ್‌ ಜಲಸಂಧಿ ದಾಟಲು ಬಿಡದಂತೆ ಕಟ್ಟಾಜ್ಞೆ ಹೊರಡಿಸಿದ್ದಾರೆ. ಇದು ವಿಶ್ವದಲ್ಲಿ ಮತ್ತೆ ತೈಲ ಬಿಕ್ಕಟ್ಟು ಹೆಚ್ಚಿಸಲು ಕಾರಣವಾಗುತ್ತಾ ಅನ್ನೋ ಆತಂಕ ಮೂಡಿದೆ.

Share This Article