ಗುಪ್ತಚರ ಇಲಾಖೆ ವರದಿ ಸಿಗಲು ನಿಖಿಲ್ ಕುಮಾರಸ್ವಾಮಿ ಯಾರು: ಸುರೇಶ್ ಕುಮಾರ್ ಪ್ರಶ್ನೆ

Public TV
1 Min Read

ಬೆಂಗಳೂರು: ಗುಪ್ತಚರ ಇಲಾಖೆಯ ವರದಿ ಸಿಗಲು ನಿಖಿಲ್ ಕುಮಾರಸ್ವಾಮಿ ಯಾರು ಎಂದು ಬಿಜೆಪಿ ಶಾಸಕ ಸುರೇಶ್ ಕುಮಾರ್ ಪ್ರಶ್ನಿಸಿದ್ದಾರೆ.

ಮಂಗಳವಾರ ನಿಖಿಲ್ ಕುಮಾರಸ್ವಾಮಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡುತ್ತಾ, ನಮಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಬಂದಿದೆ. ರೈತರು ಯಾರೂ ಈ ರೀತಿ ಗೂಂಡಾ ವರ್ತನೆ ಮಾಡಲ್ಲವೆಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಸುರೇಶ್ ಕುಮಾರ್ ಖಂಡಿಸಿದ್ದು, ಗುಪ್ತಚರ ಇಲಾಖೆಯ ವರದಿ ಸಿಗಲು ನಿಖಿಲ್ ಯಾರು ಎಂದು ಪ್ರಶ್ನಿಸಿದ್ದಾರೆ.

ಈ ಬಗ್ಗೆ ತಮ್ಮ ಟ್ವಿಟ್ಟರ್‍ನಲ್ಲಿ ವಿಡಿಯೋ ಸಹಿತ, ರಾಜ್ಯ ಗುಪ್ತಚರ ಇಲಾಖೆ ಅಷ್ಟೊಂದು ಸಸ್ತಾ ಆಗಿದೇಯ? ಗುಪ್ತಚರ ಇಲಾಖೆ ವರದಿಯನ್ನು ಪಡೆಯಲು ನಿಖಿಲ್ ಕುಮಾರಸ್ವಾಮಿ ಯಾವ ಅಧಿಕಾರದಲ್ಲಿದ್ದಾರೆ? ನಿಖಿಲ್ ಸಿಎಂ ಪುತ್ರ ಎನ್ನುವ ಕಾರಣಕ್ಕೆ ಗುಪ್ತಚರ ಇಲಾಖೆ ಮಹಾದವಕಾಶ ನೀಡಿತೆ? ಈ ಕೂಡಲೇ ಸಿಎಂ ಕುಮಾರಸ್ವಾಮಿಯವರು ಇದಕ್ಕೆ ಸ್ಪಷ್ಟನೆ ನೀಡಬೇಕೆಂದು ಬರೆದುಕೊಂಡಿದ್ದಾರೆ.

ಕೇವಲ ಮುಖ್ಯಮಂತ್ರಿಗಳ ಪುತ್ರನಾಗಿದ್ದಕ್ಕೆ, ನಿಖಿಲ್ ಗೆ ಗುಪ್ತಚರ ಇಲಾಖೆಗಳು ವರದಿಗಳು ಹೇಗೆ ಸಿಗುತ್ತಿವೆ. ಈ ಬಗ್ಗೆ ಇಲಾಖೆಯೇ ಅವರಿಗೆ ಮಾಹಿತಿ ನೀಡುತ್ತಿದ್ದೆಯೇ ಎಂದು ಪ್ರಶ್ನಿಸುವ ಸಿಎಂ ಕುಮಾರಸ್ವಾಮಿ ಹಾಗೂ ನಿಖಿಲ್ ವಿರುದ್ಧ ಕಿಡಿಕಾರಿದ್ದಾರೆ.

ಪಬ್ಲಿಕ್ ಟಿವಿಯೊಂದಿಗೆ ನಿಖಿಲ್ ಕುಮಾರಸ್ವಾಮಿ ಮಾತನಾಡಿದ ವಿಡಿಯೋ

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಪಬ್ಲಿಕ್ ಟಿವಿ ಆಪ್ ಡೌನ್ ಲೋಡ್ ಮಾಡಿ: play.google.com/publictv
ಯೂ ಟ್ಯೂಬ್‍ನಲ್ಲಿ ಪಬ್ಲಿಕ್ ಟಿವಿಯನ್ನು ಸಬ್ ಸ್ಕ್ರೈಬ್ ಮಾಡಿ: youtube.com/publictvnewskannada
ಫೇಸ್‍ಬುಕ್‍ನಲ್ಲಿ ಪಬ್ಲಿಕ್ ಟಿವಿಯನ್ನು ಲೈಕ್ ಮಾಡಿ: facebook.com/publictv
ಟ್ವಿಟ್ಟರ್‌ನಲ್ಲಿ ಪಬ್ಲಿಕ್ ಟಿವಿಯನ್ನು ಫಾಲೋ ಮಾಡಿ: twitter.com/publictvnews

Share This Article
Leave a Comment

Leave a Reply

Your email address will not be published. Required fields are marked *