2,000 ರೂ. ಮುಖಬೆಲೆಯ ನೋಟ್ ಬ್ಯಾನ್ – ಕೇಂದ್ರ ಬಿಜೆಪಿ ವಿರುದ್ಧ ನಿಯೋಜಿತ ಸಿಎಂ ಸಿದ್ದರಾಮಯ್ಯ ಕಿಡಿ

Public TV
1 Min Read

ಬೆಂಗಳೂರು: 2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹಿಂಪಡೆದಿದೆ.

ಇನ್ಮುಂದೆ ಗ್ರಾಹಕರಿಗೆ 2,000 ರೂ. ಮುಖಬೆಲೆಯ ನೋಟುಗಳನ್ನ ನೀಡದಂತೆ ಆರ್‌ಬಿಐ ಬ್ಯಾಂಕ್‌ಗಳಿಗೆ ಸೂಚನೆ ನೀಡಿದ್ದು, ಅವುಗಳನ್ನು 2023ರ ಸೆಪ್ಟೆಂಬರ್ 30ರ ಒಳಗೆ ಬ್ಯಾಂಕುಗಳಲ್ಲಿ ಬದಲಾಯಿಸಿಕೊಳ್ಳುವಂತೆ ಆರ್‌ಬಿಐ ಪ್ರಕಟಣೆ ಮೂಲಕ ಸೂಚಿಸಿದೆ. ಇದನ್ನೂ ಓದಿ: 2,000 ರೂ. ಮುಖಬೆಲೆಯ ನೋಟ್‌ ಬ್ಯಾನ್‌ ಮಾಡಿದ RBI

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿರುವ ರಾಜ್ಯದ ನಿಯೋಜಿತ ಸಿಎಂ ಸಿದ್ದರಾಮಯ್ಯ (Siddaramaiah), ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಂದ ಮತ್ತೊಮ್ಮೆ ನೋಟು ನಿಷೇಧ ಆಗಿದೆ. ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆಗೆ ಸೆಳೆಯಲು ಬಿಜೆಪಿ ಕೇಂದ್ರ ಸರ್ಕಾರ ಪ್ರತ್ನಿಸಿದೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಪ್ರಮಾಣವಚನ ಹಿನ್ನಲೆ ಟ್ರಾಫಿಕ್‌ ಜಾಮ್‌ ಸಾಧ್ಯತೆ; ಸಿಇಟಿ ಪರೀಕ್ಷೆ ಕೇಂದ್ರಗಳಿಗೆ ಬೇಗನೇ ಹೋಗಿ – ವಿದ್ಯಾರ್ಥಿಗಳಲ್ಲಿ ಡಿಕೆಶಿ ಮನವಿ

ಇದು ಬೇಸರದ ಸಂಗತಿ. ಬಿಜೆಪಿ ಕೇಂದ್ರ ಸರ್ಕಾರಕ್ಕೆ ತಮ್ಮದೇ ನೀತಿಗಳ ಬಗ್ಗೆ ಸ್ಪಷ್ಟತೆಯಿಲ್ಲ. 2,000 ರೂ. ಮುಖಬೆಲೆಯ ನೋಟುಗಳನ್ನು ಬ್ಯಾನ್ ಮಾಡುವ ಯೋಜನೆ ಇದ್ದಿದ್ದರೆ ಅದನ್ನು 2016ರಲ್ಲಿ ಏಕೆ ಪರಿಚಯಿಸಿದರು. ತಮ್ಮ ವೈಫಲ್ಯಗಳಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿಯ ಹತಾಶ ಪ್ರಯತ್ನ ಇದಾಗಿದೆ ಎಂದು ನೋಟ್ ಬ್ಯಾನ್ ಹ್ಯಾಶ್‌ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದ್ದಾರೆ.

Share This Article