ಕಾಂಗ್ರೆಸ್‌ನಲ್ಲೇ ಮಾತಿಗೆ ಬೆಲೆಯಿಲ್ಲದಷ್ಟು ಡಿಕೆಶಿ ಡಮ್ಮಿ ಆಗಿದ್ದೇಕೆ? – ಟ್ವೀಟ್ ಮಾಡಿ ಕಾಲೆಳೆದ ಬಿಜೆಪಿ

Public TV
1 Min Read

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮಾತು ಮೀರಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದಾದರೆ ಅದು ಪಿತೂರಿ ಅಲ್ಲದೇ ಮತ್ತಿನ್ನೇನು? ಪಕ್ಷದ ಅಧ್ಯಕ್ಷರಿಗೇ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲದಷ್ಟು ಡಮ್ಮಿ ಡಿಕೆಶಿ ಆಗಿದ್ದೇಕೆ ಎಂದು ಪ್ರಶ್ನಿಸುವ ಮೂಲಕ ಬಿಜೆಪಿ ಕಾಲೆಳೆದಿದೆ.

ಟ್ವೀಟ್‌ನಲ್ಲೇನಿದೆ?
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬದ ಪ್ರಯುಕ್ತ ನಡೆಯುತ್ತಿರುವ ಸಿದ್ದರಾಮೋತ್ಸವ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದ್ದು, ಡಿಕೆಶಿ ಅವರೇ ಕೆಪಿಸಿಸಿ ಅಧ್ಯಕ್ಷರಾದ ನಿಮ್ಮ ಮಾತು ಮೀರಿ ಸಿದ್ದರಾಮೋತ್ಸವ ಮಾಡುತ್ತಿದ್ದಾರೆ ಎಂದಾದರೆ, ನಿಮ್ಮ ಸಂದೇಶ ತಲುಪುತ್ತಿಲ್ಲ ಅಥವಾ ನಿಮ್ಮ ಮಾತಿಗೆ ಬೆಲೆ ಇಲ್ಲ ಎಂದರ್ಥವಲ್ಲವೇ?

ವಿಪಕ್ಷ ನಾಯಕ ಸಿದ್ದರಾಮಯ್ಯರ ಹುಟ್ಟುಹಬ್ಬ ಅದ್ಧೂರಿಯಾಗಿ ನಡೆಯುತ್ತಿರುವುದು ಡಿ.ಕೆ.ಶಿವಕುಮಾರ್ ಅವರಿಗೆ ಗೊತ್ತಿಲ್ಲ ಎಂದಾದರೆ ಪಕ್ಷದಲ್ಲಿ ಡಿಕೆಶಿ ಬೆನ್ನ ಹಿಂದೆ ನಡೆಯುತ್ತಿರುವುದು ಪಿತೂರಿಯಲ್ಲದೆ ಮತ್ತೇನು? ಪಕ್ಷದ ಅಧ್ಯಕ್ಷರಿಗೇ ಇದನ್ನು ನಿಯಂತ್ರಿಸಲು ಸಾಧ್ಯವಿಲ್ಲದಷ್ಟು #ಡಮ್ಮಿಡಿಕೆಶಿ ಆಗಿದ್ದೇಕೆ.

ವ್ಯಕ್ತಿ ಮುಖ್ಯವಲ್ಲ, ಪಕ್ಷ ಮುಖ್ಯ ಎಂಬ ಡಿ.ಕೆ.ಶಿವಕುಮಾರ್ ಅವರ ಮಾತನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಅವರ ಪಟಾಲಂ ಒಪ್ಪುತ್ತದೆಯೇ? ಸಿದ್ದರಾಮೋತ್ಸವ ಮಾಡುತ್ತೇವೆ ಎಂದು ಹೊರಟಿರುವ ಸಿದ್ದರಾಮಯ್ಯ ಬಣದ ನಾಯಕರನ್ನು ನಿಯಂತ್ರಿಸಲು ಡಿಕೆಶಿ ಅವರಿಗೇಕೆ ಸಾಧ್ಯವಾಗುತ್ತಿಲ್ಲ?.

ಇತ್ತೀಚಿಗೆ ರಾಜಸ್ಥಾನದಲ್ಲಿ ಡಿಕೆಶಿ ಭಾಗವಹಿಸಿದ ಚಿಂತನಾ ಶಿಬಿರದಲ್ಲೂ, ಮೊನ್ನೆ ದೆಹಲಿಯಲ್ಲಿ ನಕಲಿ ಗಾಂಧಿಗಳ ಭೇಟಿ ಮಾಡಿದಾಗಲೂ, ಸಿದ್ದರಾಮಾತ್ಸವದ ಬಗ್ಗೆ ಯಾರೂ ಹೇಳಲಿಲ್ಲವೇ? ನಿಮ್ಮಿಬ್ಬರ ನಡುವೆ ಈಗ ಜೋಡೋ ಆಟವೋ ಅಥವಾ ತೋಡೋ ಆಟವೋ?.

ರಾಜ್ಯ ಕಾಂಗ್ರೆಸ್ಸಿಗೆ ಅಧ್ಯಕ್ಷ ಯಾರು ಅನ್ನೋದೇ ಈಗ ಯಕ್ಷ ಪ್ರಶ್ನೆ. ನನ್ನ ಉತ್ಸವಕ್ಕೆ ರಾಹುಲ್ ಬರುತ್ತಾರೆ ಎಂದು ಸಿದ್ದರಾಮಯ್ಯ ಹೇಳ್ತಾರೆ. ರಾಹುಲ್ ಬರೋ ವಿಷಯವೇ ಗೊತ್ತಿಲ್ಲವೆಂದು ಡಿಕೆಶಿ ಹೇಳ್ತಾರೆ. ಅಧ್ಯಕ್ಷರಿಗೇ ಮಾಹಿತಿಯಿಲ್ಲದೇ ಬರ್ತಾರೆ ಅಂದ್ರೆ ಇದು ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಯ ಸೂಚನೆಯೇ ಎಂದು ಬಿಜೆಪಿ ಸಂಶಯ ವ್ಯಕ್ತಪಡಿಸಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *