ದೆಹಲಿ ಬಿಟ್ಟು ಗುಜರಾತ್ ನಲ್ಲಿ ಜಪಾನ್ ಪ್ರಧಾನಿಗೆ ರಾಜಾತಿಥ್ಯ ನೀಡಿದ್ದು ಯಾಕೆ: ಕಾಂಗ್ರೆಸ್ ಪ್ರಶ್ನೆ

Public TV
1 Min Read

ನವದೆಹಲಿ: ಜಪಾನ್ ಪ್ರಧಾನಿ ಅಬೆ ಜೊತೆಗಿನ ಎರಡು ದಿನಗಳ ಭಾರತದ ಭೇಟಿಯನ್ನು ಮೋದಿ ಸರ್ಕಾರವು ತನ್ನ ರಾಜಕೀಯ ಲಾಭವನ್ನು ಹೆಚ್ಚಿಸಿಕೊಳ್ಳಲು ಬಳಸುತ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಕಾಂಗ್ರೆಸ್ ಪಕ್ಷದ ಮುಖಂಡ ಮನೀಷ್ ತಿವಾರಿ ಪ್ರತಿಕ್ರಿಯಿಸಿ, ಯಾವುದೇ ಪ್ರತಿಷ್ಟಿತ ದೇಶದ ಪ್ರಧಾನಿಗಳು ದೇಶಕ್ಕೆ ಆಗಮಿಸಿದರೆ ಅವರಿಗೆ ದೆಹಲಿಯಲ್ಲಿ ಅತಿಥ್ಯವನ್ನು ನೀಡಲಾಗುತ್ತದೆ. ಆದರೆ ಈ ಬಾರಿ ಗುಜರಾತ್ ನಲ್ಲಿ ರಾಜಾತಿಥ್ಯ ನೀಡಿದ್ದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಜಪಾನ್ ಪ್ರಧಾನಿ ಅವರು ಗುಜರಾತ್‍ಗೆ ಭೇಟಿ ನೀಡಿದ ಬಗ್ಗೆ ನಮ್ಮ ಆಕ್ಷೇಪ ಇಲ್ಲ. ಅದರೆ ಮುಂದಿನ ದಿನಗಳಲ್ಲಿ ಗುಜರಾತ್ ನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಈ ಸಂದರ್ಭದಲ್ಲಿ ಪ್ರತಿಷ್ಠಿತ ದೇಶದ ಪ್ರಧಾನಿಗಳ ಜೊತೆ ರೋಡ್ ಶೋ ನಡೆಸುವ ಅಗತ್ಯತೆಯನ್ನು ಪ್ರಶ್ನಿಸುತ್ತಿದ್ದೇವೆ ಎಂದರು.

ಬಿಜೆಪಿಯ ಈ ನಡೆಯು ಮುಂದಿನ ಚುನಾವಣೆಯಲ್ಲಿ ರಾಜಕೀಯ ಲಾಭವನ್ನು ಪಡೆಯುವ ಉದ್ದೇಶವನ್ನು ಹೊಂದಿರುವುದಿಲ್ಲ ಎಂದು ಆಶಿಸುತ್ತೇವೆ. ಜಪಾನ್ ಹಾಗೂ ಭಾರತದ ನಡುವೆ ಹಲವು ವರ್ಷಗಳಿಂದಲೂ ಉತ್ತಮ ಸ್ನೇಹ ಸಂಬಂಧವನ್ನು ಹೊಂದಿದ್ದು, ಹಲವು ಬಾರಿ ಜಪಾನ್ ನಮಗೇ ಸಹಾಯದ ಹಸ್ತವನ್ನು ಚಾಚಿದೆ. ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ವೇಳೆಯಲ್ಲೂ ಉತ್ತಮ ಸಂಬಂಧಗಳನ್ನು ಏರ್ಪಡಿಸಲಾಗಿತ್ತು ಎಂದು ಮನೀಷ್ ತಿವಾರಿ ತಿಳಿಸಿದರು.

ರೋಹಿಂಗ್ಯಾ ಮುಸ್ಲಿಮ್ ನಿರಾಶ್ರಿತರ ವಿಚಾರದ ವಿಶ್ವ ಸಂಸ್ಥೆಯ ಮಾನವ ಹಕ್ಕುಗಳ ಆಯೋಗದ ಟೀಕೆ ಭಾರತ ಒಳಗಾಗಬೇಕಾಯಿತು. ಸರ್ಕಾರದ ಈ ನಡೆಯು ಭಾರತೀಯ ಸಂಸ್ಕೃತಿಗೆ ಸಂಪೂರ್ಣ ವಿರುದ್ಧವಾಗಿದ್ದು. ನೆರೆಯ ದೇಶಗಳೊಂದಿಗೆ ಉತ್ತಮ ಸಂಬಂಧಗಳನ್ನು ಏರ್ಪಡಿಸಲು ಈ ಕ್ರಮಗಳು ಋಣಾತ್ಮಾಕ ಪರಿಣಾಮಗಳನ್ನು ಬೀರುತ್ತದೆ. ಭಾರತವು ಎಂದು ಈ ರೀತಿಯ ಪರಿಸ್ಥಿತಿಯನ್ನು ಎದುರಿಸಲಿಲ್ಲ ಎಂದರು.

ಜಪಾನ್ ಪ್ರಧಾನಿ ಶಿಂಜೋ ಅಬೆ ಅವರು ತಮ್ಮ ಎರಡು ದಿನಗಳ ಪ್ರವಾಸಕ್ಕಾಗಿ ಭಾರತಕ್ಕೆ ಆಗಮಿಸಿದ್ದು, ಭಾರತ-ಜಪಾನ್ ಸಹಕಾರದ ಮೊದಲ ಬುಲೆಟ್ ಟ್ರೈನ್ ಯೋಜನೆಗೆ ಅಹಮದಾಬಾದ್ ನಲ್ಲಿ ಶಂಕುಸ್ಥಾಪನೆ ಮಾಡಿದರು.

Share This Article
Leave a Comment

Leave a Reply

Your email address will not be published. Required fields are marked *