ಸುದೀಪ್ ಹುಟ್ಟು ಹಬ್ಬಕ್ಕೆ ಯಾಕೆ ಸಿನಿಮಾ ಘೋಷಣೆ ಇಲ್ಲ?: ಅನುಮಾನ ಮೂಡಿಸಿದ ಕಿಚ್ಚನ ನಡೆ

Public TV
1 Min Read

ನಿನ್ನೆಯಷ್ಟೇ ಕಿಚ್ಚ ಸುದೀಪ್ ಅದ್ಧೂರಿಯಾಗಿ ತಮ್ಮ ಹುಟ್ಟು ಹಬ್ಬವನ್ನು ಆಚರಿಸಿಕೊಂಡಿದ್ದಾರೆ. ನಾಡಿನ ಅನೇಕ ನಟ, ನಟಿಯರು, ಮುಖ್ಯಮಂತ್ರಿಗಳಾದಿಯಾಗಿ ರಾಜಕೀಯ ಮುಖಂಡರು ಕಿಚ್ಚನಿಗೆ ಶುಭಾಶಯ ಕೋರಿದ್ದಾರೆ. ಈ ಸಂದರ್ಭದಲ್ಲಿ ಕಿಚ್ಚನ ಅಭಿಮಾನಿಗಳು ಹೊಸ ಸಿನಿಮಾ ಘೋಷಣೆ ಬಗ್ಗೆ ನಿರೀಕ್ಷೆ ಹೊಂದಿದ್ದರು. ಆದರೆ ಯಾವುದೇ ಸಿನಿಮಾ ಘೋಷಣೆ ಮಾಡದೆ ಅಚ್ಚರಿ ಮೂಡಿಸಿದ್ದಾರೆ ಸುದೀಪ್. ಕೈಯಲ್ಲಿ ಅಷ್ಟೊಂದು ಸಿನಿಮಾಗಳಿದ್ದರೂ, ಒಂದೂ ಘೋಷಣೆ ಆಗದೇ ಇರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.

ವಿಕ್ರಾಂತ್ ರೋಣ ಸಿನಿಮಾದ ನಂತರ ಮತ್ತೆ ಅನೂಪ್ ಭಂಡಾರಿ ಜೊತೆ ಸಿನಿಮಾ ಮಾಡುತ್ತಿರುವ ವಿಷಯ ಹರಿದಾಡುತ್ತಿದೆ. ಈ ಹಿಂದೆ ಘೋಷಣೆ ಆದಂತೆ ಬಿಲ್ಲ ರಂಗ ಬಾಷಾ ಸಿನಿಮಾದ ಕಥೆ ಕೆಲಸ ಶುರು ಮಾಡಿದ್ದಾರೆ. ಅಲ್ಲದೇ, ಇತ್ತೀಚೆಗಷ್ಟೇ ತೆಲುಗು ಸಿನಿಮಾವನ್ನು ಒಪ್ಪಿಕೊಂಡಿರುವ ಸುದ್ದಿಯೂ ಇತ್ತು. ಅಲ್ಲದೇ ಸ್ವತಃ ತಾವೇ ಸಲ್ಮಾನ್ ಖಾನ್‌ಗಾಗಿ ಸಿನಿಮಾ ಮಾಡುವುದಾಗಿ ಹೇಳಿಕೊಂಡಿದ್ದರು. ರಕ್ಷಿತ್ ಶೆಟ್ಟಿ ಮಾಡಬೇಕಿರುವ ಸಿನಿಮಾ ಹಾಗೆಯೇ ಉಳಿದುಕೊಂಡಿದೆ. ಇಷ್ಟೊಂದು ಚಿತ್ರಗಳು ಕೈಯಲ್ಲಿದ್ದೂ, ಒಂದೂ ಘೋಷಣೆ ಮಾಡಿದೇ ಇರುವುದು ಕುತೂಹಲಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಹಳೆ ಗರ್ಲ್ ಫ್ರೆಂಡ್‍ಗಾಗಿ ಹಂಬಲಿಸುತ್ತಿರುವ ಜಶ್ವಂತ್..!

ಕಿಚ್ಚ ಸುದೀಪ್ ಮೊದಲು ಯಾವ ಸಿನಿಮಾ ಮಾಡಬೇಕು ಎನ್ನುವ ಗೊಂದಲದಲ್ಲಿದ್ದಾರೆ ಎಂದು ಹೇಳಲಾಗುತ್ತಿದೆ. ನಟಿಸಬೇಕಾ ಅಥವಾ ನಿರ್ದೇಶನ ಮಾಡಬೇಕಾ ಎನ್ನುವ ಚರ್ಚೆ ಕೂಡ ಶುರುವಾಗಿದೆ. ಹೀಗಾಗಿ ಹೊಸ ಸಿನಿಮಾದ ಅಪ್‌ಡೇಟ್ ನೀಡಲು ಸಾಧ್ಯವಾಗಿಲ್ಲ ಎನ್ನುತ್ತವೆ ಮೂಲಗಳು. ಪ್ರತಿ ಸಾರಿಯೂ ಒಂದಿಲ್ಲೊಂದು ವಿಶೇಷ ಕಂಡಿದ್ದ ಅಭಿಮಾನಿಗಳು ಈ ಬಾರಿಯೂ ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ ಸ್ವತಃ ಸುದೀಪ್ ಅವರೇ ಅಭಿಮಾನಿಗಳಿಗೆ ಸಿಗುವ ಮೂಲಕ ಎಲ್ಲರನ್ನೂ ಖುಷಿಗೊಳಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *