ಆನಂದ್ ಸಿಂಗ್ ಮೇಲೆ ಹಲ್ಲೆ- ಶಾಸಕ ಗಣೇಶ್ ಇನ್ನೂ ಜಾಮೀನು ಅರ್ಜಿ ಸಲ್ಲಿಸಿಲ್ಲ ಏಕೆ..?

Public TV
1 Min Read

ಬೆಂಗಳೂರು: ಶಾಸಕ ಆನಂದ್ ಸಿಂಗ್ ಮೇಲೆ ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಗಣೇಶ್ ಅವರಿಗೆ ಜೈಲು ಶಿಕ್ಷೆ ತಪ್ಪಲಿಲ್ಲ.

ಪರಪ್ಪನ ಅಗ್ರಹಾರದಲ್ಲಿರೋ ಕಂಪ್ಲಿ ಗಣೇಶ್, ಸುಲಭವಾಗಿ ಜಾಮೀನು ಸಿಗಬಹುದಾದ್ರೂ ಜಾಮೀನಿಗೆ ಅರ್ಜಿ ಸಲ್ಲಿಕೆಯಾಗಿಲ್ಲ. ಯಾಕಂದ್ರೆ ಈ ಜಾಮೀನು ಅರ್ಜಿಯ ಹಿಂದೆ ಕಾಂಗ್ರೆಸ್ ಬಿಜೆಪಿ ಕೈವಾಡವಿದೆ ಎಂದು ಹೇಳಲಾಗುತ್ತಿದೆ.

ಕಂಪ್ಲಿ ಗಣೇಶ್ ಗೆ ಜಾಮೀನು ಕೊಡಿಸಲು ಬಿಜೆಪಿ ಅವರು ವಕೀಲರ ಸಂಪರ್ಕ ಮಾಡಿದ್ದಾರೆ. ಆದ್ರೆ ಜಾಮೀನಿಗಾಗಿ ಅರ್ಜಿ ಸಲ್ಲಿಸಬೇಡಿ ಎಂದು ಕಾಂಗ್ರೆಸ್ ನಾಯಕರು ವಕೀಲರ ಮೇಲೆ ಒತ್ತಡ ಹೇರಿದ್ದಾರೆ. ಒಂದು ವೇಳೆ ಜಾಮೀನು ಸಿಕ್ಕಿಬಿಟ್ರೆ ಗಣೇಶ್ ಬಿಜೆಪಿ ಸೇರೋ ಭೀತಿಯಿಂದ ಕಾಂಗ್ರೆಸ್ ನಾಯಕರು ಈ ರೀತಿ ಹೇಳುತ್ತಿದ್ದಾರೆ ಎಂಬ ಮಾಹಿತಿ ಲಭಿಸಿದೆ.

ಲೋಕಸಭಾ ಎಲೆಕ್ಷನ್ ನಲ್ಲಿ ಬಳ್ಳಾರಿಯಲ್ಲಿ ಹಿನ್ನಡೆ ಭೀತಿ ಎದುರಾಗಿದ್ದು, ಹೀಗಾಗಿ ಜಾಮೀನಿಗಾಗಿ ಅರ್ಜಿ ಸಲ್ಲಿಸಬೇಡಿ ಎಂದು ಕಾಂಗ್ರೆಸ್ ನಾಯಕರು ಒತ್ತಡ ಹೇರುತ್ತಿದ್ದಾರೆ. ಇಬ್ಬರ ಜಗಳದಿಂದಾಗಿ ಗಣೇಶ್ ಜೈಲಿನಲ್ಲೇ ದಿನ ದೂಡುತ್ತಿದ್ದಾರೆ.

ಒಂದೇ ದಿನದಲ್ಲಿ ಜಾಮೀನು ಸಿಗೋ ನಿರೀಕ್ಷೆಯಲ್ಲಿದ್ದ ಕಂಪ್ಲಿ ಗಣೇಶ್, ಈಗ ಉಭಯ ಪಕ್ಷಗಳ ಜಗಳದಲ್ಲಿ ಸಿಲುಕಿದ್ದಾರೆ. ಲೋಕಸಭಾ ಚುನಾವಣಾ ಮುಗಿಯುವವರೆಗೂ ಜೈಲಿನಲ್ಲಿ ಇರಬೇಕಾದ ಪರಿಸ್ಥತಿ ಎದುರಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *