ತವರು ಮನೆ ಸೇರಿದ್ದ ಪತ್ನಿಯನ್ನು ಚುಚ್ಚಿ ಕೊಂದ ಪತಿ

Public TV
1 Min Read

ಮೈಸೂರು: ತವರು ಮನೆ ಸೇರಿದ್ದ ಪತ್ನಿಯನ್ನು ಪತಿ ಭೀಕರವಾಗಿ ಕೊಂದ ಘಟನೆ ಮೈಸೂರಿನ (Mysuru) ಕುಂಬಾರಕೊಪ್ಪಲಿನಲ್ಲಿ ನಡೆದಿದೆ.

ಹರ್ಷಿತಾ (21)ವರ್ಷ ಮೃತ ದುರ್ದೈವಿ. ಈಕೆಯನ್ನು ಪತಿ ಮಾದೇಶ್ (30) ಕೊಲೆ ಮಾಡಿದ್ದು, ಈತ ಗುಂಡ್ಲುಪೇಟೆ ತಾಲೂಕಿನ ಬೇರಂಬಳ್ಳಿ ಗ್ರಾಮದ ನಿವಾಸಿ.

ವರ್ಷದ ಹಿಂದೆ ಹರ್ಷಿತಾ, ಮಾದೇಶ್ ಇಬ್ಬರು ಮದುವೆಯಾಗಿದ್ದರು. ಪ್ರಾರಂಭದ ದಿನಗಳಲ್ಲಿ ಅನ್ಯೋನತೆಯಿಂದ ಇದ್ದ ದಂಪತಿ ನಡುವೆ ಕ್ರಮೇಣ ಕ್ಷುಲ್ಲಕ ಕಾರಣಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಇದರಿಂದ ಬೇಸರಗೊಂಡ ಹರ್ಷಿತಾ ತವರು ಮನೆ ಸೇರಿದ್ದಳು. ಹೀಗಾಗಿ ಹರ್ಷಿತಾಳನ್ನ ಕರೆದುಕೊಂಡು ಹೋಗಲೆಂದು ಮಾದೇಶ್ ಬಂದಿದ್ದನು.

ಆಗ ಹರ್ಷಿತಾ ಮೇಲೆ ಮಾದೇಶ್ ಮನಸ್ಸೋ ಇಚ್ಛೆ ಚಾಕುವಿನಲ್ಲಿ ಚುಚ್ಚಿ ಕೊಲೆ ಮಾಡಿದ್ದಾನೆ. ಇತ್ತ ಅಡ್ಡ ಬಂದ ಅತ್ತೆಯನ್ನು ಕೊಲೆ ಮಾಡಲು ಯತ್ನಿಸಿದ್ದಾನೆ. ಘಟನೆಯ ಮಾಹಿತಿ ಅರಿತ ಕೂಡಲೇ ಮೇಟಗಳ್ಳಿ ಪೊಲೀಸರು (Metagalli Police Station) ಸ್ಥಳಕ್ಕಾಗಿಮಿಸಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್