ಮಳೆಯ ಆರ್ಭಟದ ನಂತ್ರ ಗ್ರಾಮಗಳತ್ತ ಕಾಡುಪ್ರಾಣಿಗಳು-ಒಡೆಯನಿಗಾಗಿ ಕಾಯ್ತೀರೋ ನಾಯಿ

Public TV
2 Min Read

-ಭೂಮಿಯಲ್ಲಿ ನೀರಿನ ಶಬ್ಧ

ಕೊಡಗು: ಮಹಾಮಳೆ ಮತ್ತು ಪ್ರವಾಹಕ್ಕೆ ಸಿಲುಕು ನಲುಗಿರುವ ಕೊಡಗು ಹಾಗೂ ಮಂಗಳೂರಿನ ಕೆಲವು ಕಡೆ ಇಂದು ಮತ್ತು ಬುಧವಾರ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಂದು ಕಡೆ ಮಳೆ ಬಿಡುವ ನೀಡಿದ ಹಿನ್ನೆಲೆಯಲ್ಲಿ ಹಲವು ನಿರಾಶ್ರಿತರು ತಮ್ಮ ಮನೆಗಳತ್ತ ಆಗಮಿಸುತ್ತಿದ್ದಾರೆ. ಒಂದು ಕಡೆ ಕಾಡು ಪ್ರಾಣಿಗಳು ಗ್ರಾಮಗಳ ಮುಖ ಮಾಡಿದ್ದು, ಗ್ರಾಮಸ್ಥರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.

ಭಾಗಮಂಡಲ ಸಮೀಪದ ತಾವೂರು ಗ್ರಾಮದ ಪುರುಷೋತ್ತಮ್ ಮನೆಯಲ್ಲಿ ಸೋಮವಾರ ರಾತ್ರಿ ಹುಲಿಯೊಂದು ಸಾಕಿದ ನಾಯಿ ಮೇಲೆ ದಾಳಿ ನಡೆಸಿದೆ. ಪರಿಣಾಮ ನಾಯಿ ಗಂಭೀರವಾಗಿ ಗಾಯಗೊಂಡಿದ್ದ ನಾಯಿ ಮೃತ ಪಟ್ಟಿದೆ. ಇದರಿಂದಾಗಿ ಗ್ರಾಮದಲ್ಲಿ ಅತಂಕ ಹೆಚ್ಚಾಗಿದೆ. ಹತ್ತು ದಿನಗಳಿಂದ ಮೂವತ್ತೊಕ್ಲು ಗ್ರಾಮದ ನಿವಾಸಿ ಮುಕ್ಕಾಟಿರ ಉತ್ತಪ್ಪ ಸುಳಿವಿಲ್ಲ. ಮನೆ ಮಣ್ಣಿನೊಂದಿಗೆ ಸುಮಾರು 500 ಮೀಟರ್ ಜರಿದು ಬಂದು ನಿಂತಿದೆ.

ಒಡೆಯನಿಗಾಗಿ ಮನೆ ಮುಂದೆ ನಾಯಿಯೊಂದು ಸುಳಿದಾಡ್ತಿದೆ. ಈ ಮಧ್ಯೆ ಕೊಡಗು ಮತ್ತು ಕೇರಳ ಗಡಿಬಾಗವಾದ ಕರಿಕೆ ಸಮೀಪದ ಚೇತುಕಾಯ ಗ್ರಾಮದ ಕೇಶವ ನಾಯ್ಕರ ಮನೆ ಹಿಂಬದಿಯಲ್ಲಿ ಭೂಮಿಯೊಳಗೆಯಿಂದ ನೀರಿನ ಶಬ್ಧ ಕೇಳಿ ಬರುತ್ತಿದೆ. ಇದರಿಂದ ಗ್ರಾಮಸ್ಥರು ಅಂಕತಕ್ಕೆ ಒಳಗಾಗಿದ್ದಾರೆ. ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತದಿಂದಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಪ್ರದೇಶದಲ್ಲಿ ಮತ್ತೊಮ್ಮೆ ಮಳೆಯಾಗಲಿದೆ. ಈ ಸಂಬಂಧ ಹವಾಮಾನ ಇಲಾಖೆ ಮಂಗಳೂರು ಮತ್ತು ಕೊಡಗು ಜಿಲ್ಲಾಧಿಕಾರಿಗಳಿಗೆ ಮಾಹಿತಿ ರವಾನಿಸಿದೆ.

ಕೊಡಗು, ಕರಾವಳಿಯಲ್ಲಿ ಮತ್ತೆ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಆದ್ದರಿಂದ ಮುಂಜಾಗೃತ ಕ್ರಮವಾಗಿ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಇತ್ತ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಕೊಡಗಿಗೆ ಆಗಸ್ಟ್ 31ರವರೆಗೆ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ.

ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇರುವುದರಿಂದ ಆಗಸ್ಟ್ 31ರವರೆಗೆ ಕೊಡಗು ಪ್ರವಾಸಕ್ಕೆ ಬರಬೇಡಿ ಎಂದು ಜಿಲ್ಲಾಧಿಕಾರಿ ಶ್ರೀವಿದ್ಯಾ ಆದೇಶ ಹೊರಡಿಸಿದ್ದಾರೆ. ಒಂದು ವೇಳೆ ಅಧಿಕಾರಗಳ ಆದೇಶವನ್ನು ನಿರಾಕರಿಸಿ ಪ್ರವಾಸಿಗರ ವಾಸ್ತವ್ಯಕ್ಕೆ ಅನುವು ಮಾಡಿಕೊಡುವ ಹೋಟೆಲ್ ರೆಸಾರ್ಟ್ ಮತ್ತು ಹೋಂಸ್ಟೇಗಳ ಮೇಲು ಕೇಸ್ ಹಾಕುವಂತೆ ಪೊಲೀಸ್ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *