ಒಂದು ಜಿಲ್ಲೆ ಹಲವು ಜಗತ್ತಿಗೆ ಸಾಕ್ಷಿಯಾದ ಕಾಫಿನಾಡು

Public TV
1 Min Read

ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಾಡಂಚಿನ ಗ್ರಾಮ ಬಿದಿರುತಳದಲ್ಲಿ ಕಣ್ಣು ಹಾಯಿಸದಲೆಲ್ಲಾ ಕಾಡು ಪ್ರಾಣಿಗಳ ಹಿಂಡು ಗೋಚರವಾಗುತ್ತಿದೆ.

ಗ್ರಾಮದ ಸತೀಶ್ ಎಂಬವರು ತಮ್ಮ ತೋಟಕ್ಕೆ ಹೋಗುವಾಗ ದಾರಿಯುದ್ದಕ್ಕೂ ಪ್ರಾಣಿಗಳು ಕಾಣಿಸಿಕೊಂಡಿದೆ. ಈ ಪ್ರಾಣಿಗಳನ್ನು ನೋಡಿದ ಅವರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಫೋಟೋಗಳನ್ನು ಕ್ಲಿಕ್ಕಿಸಿದ್ದಾರೆ. ಈ ಅಪರೂಪದ ದೃಶ್ಯಕ್ಕೆ ಸಾಕ್ಷಿಯಾದ ಕಾಫಿನಾಡು ಒಂದು ಜಿಲ್ಲೆ ಹಲವು ಜಗತ್ತು ಎನ್ನುವ ಮಾತಿಗೆ ಪೂರಕವಾಗಿದೆ.

ಒಂದೆಡೆ ನರಿ, ಮತ್ತೊಂದೆಡೆ ಆನೆ, ಮಗದೊಂದು ಕಡೆ ಜಿಂಕೆ, ಇನ್ನೊಂದೆಡೆ ಕಡವೆಗಳ ಗುಂಪು ಕಾಣಿಸಿಕೊಂಡಿದೆ. ಕಾಡು ಪ್ರಾಣಿಗಳನ್ನು ನೋಡಿ ಸ್ಥಳೀಯರಿಗೆ ಒಂದೆಡೆ ಖುಷಿ ಆದರೆ ಹಾಗೂ ಮತ್ತೊಂದೆಡೆ ಆತಂಕ ಶುರುವಾಗಿದೆ. ಗ್ರಾಮದಂಚಿನಲ್ಲಿ ಹೀಗೆ ಪ್ರಾಣಿಗಳ ಗುಂಪನ್ನು ಕಂಡ ಸ್ಥಳೀಯರು ಮತ್ತಷ್ಟು ಆತಂಕಕ್ಕೊಳಗಾಗಿದ್ದಾರೆ.

ಸದ್ಯ ಸ್ಥಳೀಯರು ಸ್ಥಳಾಂತರ ಮಾಡಿ ಎಂದು ಹೇಳುತ್ತಿದ್ದಾರೆ. ಈಗಾಗಲೇ ಬಿದಿರುತಳ ಗ್ರಾಮದ ಸ್ಥಳಾಂತರದ ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿ ಇದೆ. ಸ್ಥಳೀಯರು ಕೂಡಲೇ ನಮ್ಮನ್ನು ಸ್ಥಳಾಂತರ ಮಾಡಿ ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *