ಬೆಳ್ಳಂಬೆಳಿಗ್ಗೆ ಮನೆಯ ಅಂಗಳಕ್ಕೆ ಎಂಟ್ರಿ ಕೊಟ್ಟ ಗಜ

Public TV
1 Min Read

ಹಾಸನ: ಮಲೆನಾಡು ಭಾಗದಲ್ಲಿ ಕಾಡಾನೆಗಳ ಹಾವಳಿ ಮುಂದುವರೆದಿದೆ. ಬೆಳ್ಳಂಬೆಳಿಗ್ಗೆ ಒಂಟಿ ಸಲಗವೊಂದು (Wild Elephant) ಮನೆಯ ಅಂಗಳಕ್ಕೆ ಎಂಟ್ರಿ ಕೊಟ್ಟಿರುವ ಘಟನೆ ಸಕಲೇಶಪುರ (Sakleshpura) ತಾಲೂಕಿನ ಕೊಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸಂತೋಷ್ ಶೆಟ್ಟಿ ಎಂಬುವವರ ಮನೆಯ ಕಾಂಪೌಂಡ್ ಒಳಗೆಲ್ಲಾ ಮನಸ್ಸೋ ಇಚ್ಛೆ ಓಡಾಡಿದೆ. ಕಾಡಾನೆ ಕಂಡ ಕೂಡಲೇ ಸತೀಶ್ ಶೆಟ್ಟಿ ಮನೆಯವರು ಗಾಬರಿಯಿಂದ ಮನೆಯೊಳಗೆ ಓಡಿ ಹೋಗಿದ್ದಾರೆ. ಇದನ್ನೂ ಓದಿ: ಬ್ಯುಸಿ ನಡುವೆಯೂ ‘ಉಸಿರೇ ಉಸಿರೇ’ ಚಿತ್ರದ ಡಬ್ಬಿಂಗ್ ಮುಗಿಸಿದ ಕಿಚ್ಚ

ಮನೆಯ ಸಮೀಪ ಓಡಾಡಿದ ನಂತರ ಒಂಟಿಸಲಗ ರಸ್ತೆಗೆ ಬಂದಿದೆ. ಅರಣ್ಯ ಇಲಾಖೆ (Forest Department) ಸಿಬ್ಬಂದಿ ಒಂಟಿಸಲಗಕ್ಕೆ ಸೈರನ್ ಓಡಿಸಿದಾಗ ರಸ್ತೆ ದಾಟಿ ಕಾಫಿ ತೋಟದೊಳಗೆ ಹೋಗಿದೆ. ಕೊಲ್ಲಹಳ್ಳಿ ಗ್ರಾಮದ ಸುತ್ತಮುತ್ತ ಕಾಡಾನೆ ಸಂಚರಿಸುತ್ತಿದ್ದು ಎಚ್ಚರಿಕೆಯಿಂದ ಓಡಾಡುವಂತೆ ಸ್ಥಳೀಯರಿಗೆ ಅರಣ್ಯ ಇಲಾಖೆ ಸಿಬ್ಬಂದಿ ಮಾಹಿತಿ ನೀಡುತ್ತಿದ್ದಾರೆ.

ಕಾಡಾನೆ ಹಾವಳಿಯಿಂದ ಗ್ರಾಮಸ್ಥರು ಆತಂಕಗೊಂಡಿದ್ದು, ಕಾಫಿ ತೋಟದ ಕೆಲಸಕ್ಕೆ ಬರಲು ಕಾರ್ಮಿಕರು ಹಿಂದೇಟು ಹಾಕುತ್ತಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್