ಸಿದ್ದರಾಮಯ್ಯರನ್ನು ಸೋಲಿಸಲು ಕೇಸರಿಪಾಳಯ ಪಣ- ಸಿಎಂ ವಿರುದ್ಧ ಕಣಕ್ಕಿಳಿತಾರಾ ಬಿಎಸ್‍ವೈ ಪುತ್ರ?

Public TV
1 Min Read

ಮೈಸೂರು: ಭಾಗ್ಯಗಳ ಸರದಾರ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಬಲ ಅಭ್ಯರ್ಥಿಯಾಗಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಸ್ಪರ್ಧೆಗೆ ಬಿಜೆಪಿ ಪಾಳಯದಲ್ಲಿ ಒತ್ತಡ ಹೆಚ್ಚಾಗಿದೆ ಅಂತ ಪಕ್ಷದ ಮೂಲಗಳಿಂದ ಪಬ್ಲಿಕ್ ಟಿವಿಗೆ ಮಾಹಿತಿ ಲಭಿಸಿದೆ.

ಈ ಸಂಬಂಧ ಈಗಾಗಲೇ ವರುಣಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಯಡಿಯೂರಪ್ಪ ಮತ್ತಿತರ ಮುಖಂಡರ ಜೊತೆ ಒಂದು ಸುತ್ತಿನ ಮಾತುಕತೆ ಸಹ ನಡೆಸಿದ್ದಾರೆ ಎನ್ನಲಾಗಿದೆ.

ವರುಣಾ ಕ್ಷೇತ್ರದಲ್ಲಿ ಒಟ್ಟು 1 ಲಕ್ಷದ 95 ಸಾವಿರ ಮತಗಳಿದ್ದು, ಅವುಗಳಲ್ಲಿ 50 ಸಾವಿರ ಲಿಂಗಾಯತ ಮತಗಳಿವೆ. ಲಿಂಗಾಯತ ಮತಗಳ ಜೊತೆಗೆ ಯುವಕರ ಮತ ಅಧಿಕವಾಗಿದ್ದು, ಕಳೆದ ಬಾರಿ ಸ್ಪರ್ಧಿಸಿದ್ದ ಸಿದ್ದಲಿಂಗಸ್ವಾಮಿ 53 ಸಾವಿರ ಮತಗಳ ಅಂತದಿಂದ ಜಯಗಳಿಸಿ, ಸಿದ್ದರಾಮಯ್ಯಗೆ ನಡುಕ ಹುಟ್ಟಿಸಿದ್ರು. ಈ ಬಾರಿ ಬಿಎಸ್‍ವೈ ಪುತ್ರ ವಿಜಯೇಂದ್ರರನ್ನು ಕಣಕ್ಕಿಳಿಸಿದ್ರೆ ಲಿಂಗಾಯತ ಮತಗಳ ಜೊತೆಗೆ ಯುವಕರ ಮತಗಳನ್ನು ಪಡೆದು, ಸಿದ್ದರಾಮಯ್ಯರನ್ನು ಸೋಲಿಸಬಹುದು ಅನ್ನೋದು ಬಿಜೆಪಿ ಲೆಕ್ಕಾಚಾರವಾಗಿದೆ.

ಬಿಎಸ್‍ವೈ ಮಾತ್ರ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೆ ಕಾದು ನೋಡೋ ತಂತ್ರಕ್ಕೆ ಶರಣಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *