ಕೆಸಿಆರ್, ಕವಿತಾರ ಬಗ್ಗೆ ಮಾತಾಡಿದ್ರೆ ನಾಲಿಗೆ ಕತ್ತರಿಸುತ್ತೇನೆ – ಅರವಿಂದ್ ವಿರುದ್ಧ ಎಂಎಲ್‍ಸಿ ಶಂಬಿಪುರ ಕಿಡಿ

Public TV
1 Min Read

ಹೈದರಾಬಾದ್: ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಮತ್ತು ಅವರ ಪುತ್ರಿ ಕವಿತಾ ಕಲ್ವಕುಂಟ್ಲಾ ಅವರ ಬಗ್ಗೆ ಮಾತನಾಡಿದರೆ ನಾಲಿಗೆ ಕತ್ತರಿಸುತ್ತೇನೆ ಎಂದು ಬಿಜೆಪಿ ಸಂಸದ ಅರವಿಂದ್ ಧರಂಪುರಿ (Arvind Dharmapuri) ವಿರುದ್ಧ ಭಾರತ್ ರಾಷ್ಟ್ರ ಸಮಿತಿ (Bharat Rashtra Samithi) (ಬಿಆರ್‌ಎಸ್) ಎಂಎಲ್‍ಸಿ ಶಂಬಿಪುರ ರಾಜು (MLC Shambipur Raju) ಆಕ್ರೋಶ ಹೊರಹಾಕಿದ್ದಾರೆ.

ಕವಿತಾ (MLC Kavitha) ಅವರನ್ನು ಸೆಳೆಯಲು ಬಿಜೆಪಿ (BJP) ಯತ್ನಿಸುತ್ತಿದೆ ಎಂದು ಸಿಎಂ ಹೇಳಿಕೆ ನೀಡಿದ ಬೆನ್ನಲ್ಲೇ ಅರವಿಂದ್ ಧರಂಪುರಿ ಅವರು, ಬಿಆರ್‌ಎಸ್ ಪಕ್ಷದಲ್ಲಿ ಎಂಎಲ್‍ಸಿ ಕವಿತಾ ಅವರು ಅತೃಪ್ತರಾಗಿದ್ದು, ಕಾಂಗ್ರೆಸ್ ಸೇರಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳಿದ್ದರು. ಇದನ್ನೂ ಓದಿ: ವೈಯಕ್ತಿಕ ಟೀಕೆ ಮಾಡುತ್ತಿದ್ರೆ ಚಪ್ಪಲಿಯಲ್ಲಿ ಹೊಡಿತೀನಿ – ಬಿಜೆಪಿ ಸಂಸದರಿಗೆ ಕವಿತಾ ವಾರ್ನ್

ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಂಬಿಪುರ ರಾಜು ಅವರು, ರಾಜಕೀಯ ಮೌಲ್ಯ ಮರೆತು ಮುಖ್ಯಮಂತ್ರಿ ಕೆಸಿಆರ್ ವಿರುದ್ಧ ಅಗೌರವವಾಗಿ ಮಾತನಾಡಿದರೆ ಅರವಿಂದ್ ಧರ್ಮಪುರಿ ಅವರ ನಾಲಿಗೆ ಕತ್ತರಿಸುತ್ತೇನೆ ಎಂದು ಅರವಿಂದ್ ಧರ್ಮಪುರಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಇದನ್ನೂ ಓದಿ: ಬಿಜೆಪಿ ಸಂಸದರ ಮನೆಗೆ ನುಗ್ಗಿ TRS ಕಾರ್ಯಕರ್ತರಿಂದ ದಾಳಿ

ದೊಡ್ಡವರ ಬಗ್ಗೆ ಮಾತನಾಡುವುದರಿಂದ ತಾನೂ ದೊಡ್ಡವನಾಗುತ್ತೇನೆ ಎಂದುಕೊಂಡಿದ್ದಾರೆ. ಬಿಜೆಪಿ ನಾಯಕರಾಗಿರುವ ನೀವೇ, ಕವಿತಾ ಅವರಿಗೆ ಕರೆ ಮಾಡಿದ್ದಾರೆ ಎಂದು ಕಾಂಗ್ರೆಸ್‍ನಿಂದ ಯಾರೋ ಕರೆ ಮಾಡಿ ತಿಳಿಸಿದರು ಎನ್ನುತ್ತಿದ್ದೀರಾ. ನೀವು ಬಿಜೆಪಿಯಲ್ಲಿಯೇ ಇದ್ದುಕೊಂಡು ಈ ಬಗ್ಗೆ ಹೇಳುವುದಕ್ಕೆ ನಿಮಗೆ ನಾಚಿಕೆಯಾಗುವುದಿಲ್ಲವೇ? ಬಿಜೆಪಿಯವರಾಗಿರುವ ನೀವೇ ಇತರ ಪಕ್ಷದ ಸದಸ್ಯರೊಂದಿಗೆ ಸಂಪರ್ಕ ಹೊಂದಿರುವುದನ್ನು ಬಹಿರಂಗವಾಗಿ ಹೇಳುತ್ತಿದ್ದೀರಾ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ನೀವು ಮತ್ತು ನಿಮ್ಮ ತಂದೆ ಪಕ್ಷಗಳನ್ನು ಬದಲಾಯಿಸುತ್ತಲೇ ಇರುತ್ತೀರಿ, ಆದರೆ ನೀವು ಸಾರ್ವಜನಿಕರಿಗೆ ಏನಾದರೂ ಪ್ರಯೋಜವಾಗುವಂತಹದ್ದನ್ನು ಏನಾದರೂ ಮಾಡಿದ್ದೀರಾ? ನಾವು ನಿಮಗೆ ಎಚ್ಚರಿಕೆ ನೀಡುತ್ತಿದ್ದೇವೆ. ಇನ್ನೊಮ್ಮೆ ನೀವು ನಮ್ಮ ಸಿಎಂ ಕೆಸಿಆರ್ ಅಥವಾ ಎಂಎಲ್‍ಸಿ ಕವಿತಾ ವಿರುದ್ಧ ಅಗೌರವವಾಗಿ ಮಾತನಾಡಿದರೆ ನಿಮ್ಮ ನಾಲಿಗೆ ಕತ್ತರಿಸುತ್ತೇವೆ. ಎಚ್ಚರಿಕೆಯಿಂದಿರಿ ಎಂದು ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *