ಸುಮಲತಾ ಪಕ್ಷದ ಕಾರ್ಯಕರ್ತರಲ್ಲ- ಜೆಡಿಎಸ್ ಬೆಂಬಲ ಹೇಗೆ ನೀಡುತ್ತೆ : ಸಿಎಂ ಪ್ರಶ್ನೆ

Public TV
1 Min Read

ಬೆಂಗಳೂರು: ಮಂಡ್ಯ ಲೋಕಸಭಾ ಚುನಾವಣೆಯ ವಿಚಾರದಲ್ಲಿ ಸುಮಲತಾ ಅಂಬರೀಶ್ ಅವರಿಗೆ ಅಭಿಮಾನಿಗಳು ಚುನಾವಣೆಗೆ ನಿಲ್ಲುವಂತೆ ಒತ್ತಡ ಹಾಕಿದ್ದಾರೆ. ಆದರೆ ಅವರು ನಮ್ಮ ಪಕ್ಷದಲ್ಲಿ ಇಲ್ಲ. ಆದ್ದರಿಂದ ಯಾರಿಗೆ ಬೆಂಬಲ ಕೊಡಲು ಹೇಗೆ ಸಾಧ್ಯ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಸ್ಪರ್ಧೆ ಕುರಿತು ಪಬ್ಲಿಕ್ ಟಿವಿಗೆ ಪ್ರತಿಕ್ರಿಯಿಸಿದ ಸಿಎಂ, ಮಂಡ್ಯದಲ್ಲಿ ಕೆಲ ಅಭಿಮಾನಿಗಳು ಅವರ ಮೇಲೆ ಒತ್ತಡ ಹಾಕಿ ಚುನಾವಣೆಗೆ ನಿಲ್ಲುವಂತೆ ಹೇಳಿದ್ದಾರೆ. ಅವರ ಅಭಿಮಾನಿಗಳು ಆಸೆಯೂ ಆದೇ ಆಗಿದೆ. ಆದರೆ ಅವರಿಗೆ ಬೆಂಬಲ ನೀಡಲು ಅವರು ನನ್ನ ಪಕ್ಷದಲ್ಲಿ ಇಲ್ಲ. ಜೆಡಿಎಸ್ ಪಕ್ಷದಲ್ಲಿ ಇಲ್ಲ ಎಂದರೆ ಬೆಂಬಲ ಕೊಡಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.

ಮಂಡ್ಯದಲ್ಲಿ ಕೆಲ ಅಭಿಮಾನಿಗಳು ಸ್ಪರ್ಧೆ ಮಾಡಿಸಲೇಬೇಕು ಎನ್ನುವ ನಿರ್ಧಾರ ಮಾಡಿದ್ದಾರೆ. ಅವರು ಸ್ಪರ್ಧೆ ಮಾಡಲು ಸ್ವತಂತ್ರರಾಗಿದ್ದಾರೆ. ಆದ್ದರಿಂದ ಅವರು ತೀರ್ಮಾನ ಕೈಗೊಳ್ಳಬಹುದು ಎಂದರು.

ಇದೇ ವೇಳೆ ಶಾಸಕ ಕಂಪ್ಲಿ ಗಣೇಶ್ ಬಂಧನ ವಿಚಾರವಾಗಿ ಪ್ರತಿಕ್ರಿಯೆ ನೀಡಿ, ಕಾನೂನು ಕ್ರಮ ನಡೆಯುತ್ತದೆ ಎಂದರು. ಸಂಧಾನ ವಿಚಾರವಾಗಿ ಕಾಂಗ್ರೆಸ್ ನಾಯಕರು ಮಾತ್ರ ನಿರ್ಧಾರ ಮಾಡಬೇಕು. ಕಾನೂನು ಮಾತ್ರ ನಿಯಮದಂತೆ ಕ್ರಮ ಕೈಗೊಳ್ಳುತ್ತದೆ. ಈ ಸಂಧಾನದ ಬಗ್ಗೆ ನಾನು ಹೇಳು ಆಗಲ್ಲ ಎಂದರು. ಬೆಗ್ಗರ್ಸ್ ಕುರಿತ ಪ್ರಶ್ನೆಗೆ ನಗುಮುಖದಲ್ಲಿ ಉತ್ತರಿಸಿದ ಸಿಎಂ, ಈಗ ಎಲ್ಲವೂ ಬದಲಾವಣೆ ಆಗುತ್ತೆ ಬನ್ನಿ ಎಂದು ಹೇಳೀ ಮುಂದೆ ನಡೆದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *