ಮಂಡ್ಯ: ಪಕ್ಷದವ್ರಿಗೆ ಕಿರುಕುಳ ಕೊಟ್ರೆ ಸುಮ್ಮನಿರಲ್ಲ, ಅಧಿಕಾರಕ್ಕೆ ಬಂದ್ಮೇಲೆ ಜಾಗ ತೋರಿಸ್ತೀವಿ- ಪೊಲೀಸರಿಗೆ ಬಿಎಸ್‍ವೈ ಧಮ್ಕಿ

Public TV
1 Min Read

ಮಂಡ್ಯ: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಪೊಲೀಸ್ ಅಧಿಕಾರಿಗಳಿಗೆ ಮುಂದೆ ಅಧಿಕಾರಕ್ಕೆ ಬಂದಾಗ ನೋಡ್ಕೊತೀವಿ ಅಂತಾ ಅವಾಜ್ ಹಾಕಿದ್ದಾರೆ.

ಗುರುವಾರದಂದು ಮಂಡ್ಯದ ಶ್ರೀರಂಗಪಟ್ಟಣದಲ್ಲಿ ಬಿಜೆಪಿಯ ಜನ ಸಂಪರ್ಕ ಅಭಿಯಾನ-ಬೃಹತ್ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಬಿಎಸ್‍ವೈ, ಸ್ಥಳೀಯ ಪೊಲೀಸ್ ಅಧಿಕಾರಿಗಳು ಬಿಜೆಪಿ ಕಾರ್ಯಕ್ರಮಗಳಿಗೆ ಸ್ಥಳಾವಕಾಶ ನೀಡಲು ನಿರಾಕರಿಸಿದ್ದಲ್ಲದೇ ಬಿಜೆಪಿ ಮುಖಂಡರಿಗೆ ಕಿರುಕುಳ ನೀಡುತ್ತಿದ್ದಾರೆ. ಸಾರ್ವಜನಿಕ ಸಭೆಗೆ ಸಬ್ ಇನ್ಸ್ ಪೆಕ್ಟರ್ ಯೋಗಾನಂಜಪ್ಪ ಅನುಮತಿ ನೀಡದೇ ಕಿರುಕುಳ ನೀಡಿದ್ದಾರೆ. ಅಂತಹ ಅಧಿಕಾರಿಗಳ ಪಟ್ಟಿಯನ್ನು ನಾವು ಸಿದ್ಧಪಡಿಸ್ತೇವೆ. ಕಾಲ ಬಂದಾಗ ತೋರಿಸಬೇಕಾದ ಜಾಗ ತೋರಿಸ್ತೇವೆ. ಅದಕ್ಕೆ ಅವಕಾಶ ಕೊಡದೆ ನಿಮ್ಮ ನಡವಳಿಕೆ ತಿದ್ದುಕೊಳ್ಳಿ ಎಂದು ಬಹಿರಂಗ ಎಚ್ಚರಿಕೆ ನೀಡಿದ್ದಾರೆ.

ಸರ್ಕಾರಗಳು ಬರುತ್ತೆ, ಹೋಗುತ್ತೆ. ಆದ್ರೆ ಪೊಲೀಸರು ಎಲ್ಲರಿಗೂ ಒಂದೇ ರೀತಿ ನಡೆದುಕೊಳ್ಳಬೇಕು. ಬಿಜೆಪಿಗರನ್ನ ಲಘುವಾಗಿ ಕಾಣೋದು ತರವಲ್ಲ. ಅದು ಖಾಕಿ ಬಟ್ಟೆ ತೊಟ್ಟವರಿಗೆ ಶೋಭೆ ತರುವಂತದ್ದಲ್ಲ ಅಂದ್ರು. ಎಲ್ಲರನ್ನ ಸಮಾನವಾಗಿ ಪರಿಗಣಿಸಬೇಕು ಎಂದು ಪೊಲೀಸರಿಗೆ ಯಡಿಯೂರಪ್ಪ ಎಚ್ಚರಿಕೆ ನೀಡಿದ್ರು.

Share This Article
Leave a Comment

Leave a Reply

Your email address will not be published. Required fields are marked *