ಮಹಿಳೆಯ ಗುಪ್ತಾಂಗಕ್ಕೆ ಆ್ಯಸಿಡ್ ಎರಚಿ ಹತ್ಯೆಗೆ ಯತ್ನಿಸಿದ ವ್ಯಕ್ತಿಯ ಬಂಧನ

Public TV
1 Min Read

ಹಾವೇರಿ: ವ್ಯಕ್ತಿಯೊಬ್ಬ ವಿವಾಹಿತ ಮಹಿಳೆಯ ಗುಪ್ತಾಂಗಕ್ಕೆ ಮತ್ತು ಕಾಲಿಗೆ ಆ್ಯಸಿಡ್ ಎರಚಿ ಹತ್ಯೆಗೆ ಯತ್ನಿಸಿದ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಹುಣಸಿಕಟ್ಟಿ ಗ್ರಾಮದ ಬಳಿಯಿರುವ ಸಿದ್ದನಗುಡ್ಡದಲ್ಲಿ ನಡೆದಿದೆ.

ಮಂಜುನಾಥ್ ಕಳಸದ(42) ಕೃತ್ಯವೆಸಗಿದ ಆರೋಪಿ. ಶಿಗ್ಗಾಂವಿ ಪಟ್ಟಣದ ನಿವಾಸಿಯಾಗಿರುವ ಮಂಜುನಾಥ್ ಮಂಗಳವಾರ ಮಾತನಾಡುವುದಿದೆ ಬಾ ಎಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಆಕೆಯ ಗುಪ್ತಾಂಗ ಮತ್ತು ಕಾಲಿಗೆ ಆ್ಯಸಿಡ್ ಎರಚಿ ವಿಕೃತಿ ಮೆರೆದಿದ್ದಾನೆ.

ಮಂಜುನಾಥ್ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದನು. ಮಂಗಳವಾರ ಮಂಜುನಾಥ್ ನಿನ್ನೊಂದಿಗೆ ಮಾತನಾಡಬೇಕು ಬಾ ಎಂದು ಮಹಿಳೆಯನ್ನು ಕರೆದುಕೊಂಡು ಹೋಗಿದ್ದಾನೆ. ಈ ವೇಳೆ ಬೇರೆಯವರೊಂದಿಗೆ ಫೋನಿನಲ್ಲಿ ಮಾತನಾಡುತ್ತಿಯಾ, ನೀನು ಬೇರೆಯವರ ಜೊತೆ ಸಂಬಂಧ ಇಟ್ಟುಕೊಂಡಿದ್ದೀಯಾ ಎಂದು ಜಗಳವಾಡಿದ್ದಾನೆ.

ಜಗಳವಾಡಿದ ಬಳಿಕ ಮಂಜುನಾಥ್ ಬಾಟಲಿನಲ್ಲಿ ತಂದಿದ್ದ ಆ್ಯಸಿಡ್ ಅನ್ನು ಮಹಿಳೆಯ ಗುಪ್ತಾಂಗ ಹಾಗೂ ಕಾಲಿನ ಮೇಲೆ ಎರಚಿದ್ದಾನೆ. ಈ ಘಟನೆಯಿಂದ ಗಾಯಗೊಂಡ ಮಹಿಳೆಯನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಸದ್ಯ ಆರೋಪಿ ಮಂಜುನಾಥ್‍ನನ್ನು ಬಂಕಾಪುರ ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *