ಸೀರೆ ಹಂಚಿಕೆವಾಗ ನುಕುನುಗ್ಗಲು: ಮಗುವನ್ನು ಎತ್ತಿಕೊಂಡು ಕಾಪಾಡಿ ಎಂದು ಕಿರುಚಾಡಿದ ಮಹಿಳೆ

Public TV
1 Min Read

ಹಾಸನ: ಭಾನುವಾರ ವಿಶ್ವ ತಾಯಂದಿರ ದಿನಾಚರಣೆ ನಡೆಯಿತು. ಈ ದಿನವನ್ನು ಹಾಸನದ ಅರಕಲಗೂಡಿನಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೃಹತ್ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಿನಿಮಾ ನಟ-ನಟಿಯರು ಭಾಗವಹಿಸಿದ್ರು. ಆದ್ರೆ ಕಾರ್ಯಕ್ರಮದಲ್ಲಿ ಆದ ಸಣ್ಣ ಎಡವಟ್ಟಿನಿಂದ ತಾಯಿ, ಮಗು ಕಣ್ಣೀರಿಡುವಂತಾಗಿದ್ದು, ಆತಂಕಕ್ಕೆ ಕಾರಣವಾಗಿತ್ತು.

ಸುತ್ತಲೂ ಸಾವಿರಾರು ಜನ. ಸಾವಿರಾರು ಜನರ ನೂಕುನುಗ್ಗಲಲ್ಲಿ ನಿಂತ ತಾಯಿಯೊಬ್ಬಳು ತನ್ನ ಮಗುವನ್ನು ಕೈಯಲ್ಲಿ ಎತ್ತಿಹಿಡಿದು ಕೂಗಿಕೊಳ್ಳುತ್ತಿರುವ ದೃಶ್ಯ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದೆ. ಅರಕಲಗೂಡು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾದ ಶ್ರೀಧರ್‌ಗೌಡ ಭಾನುವಾರ ವಿಶ್ವ ತಾಯಂದಿರ ದಿನ ಕಾರ್ಯಕ್ರಮ ಆಯೋಜನೆ ಮಾಡಿದ್ರು.

ಕಾರ್ಯಕ್ರಮದಲ್ಲಿ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಧ್ರುವನಾರಾಯಣ್, ಮಾಜಿ ಸಚಿವೆ ಉಮಾಶ್ರೀ, ಚಲನಚಿತ್ರ ನಟಿಯರಾದ ಸಾನ್ವಿ ಶ್ರೀವಾತ್ಸವ್, ಮಿಲನನಾಗರಾಜ್, ಸಾಧುಕೋಕಿಲ ಸೇರಿದಂತೆ ಹಲವರು ಭಾಗವಹಿಸಿದ್ರು. ಈ ಕಾರಣದಿಂದ ಸಹಜವಾಗಿ ಕಾರ್ಯಕ್ರಮದಲ್ಲಿ ಸಾವಿರಾರು ಜನ ತಾಯಂದಿರು ಭಾಗವಹಿಸಿದ್ರು. ಅವರಿಗೆ ಸೀರೆ ಹಂಚಿಕೆ ಮಾಡಲು ಮುಂದಾದಾಗ ಜನಸಂದಣಿಯಲ್ಲಿ ಸಿಲುಕಿಕೊಂಡ ತಾಯಿ-ಮಗು ನರಳಾಡಿದರು. ಇದನ್ನೂ ಓದಿ:  ಕಾಂಗ್ರೆಸ್ ಕಾವೇರಿ, ಮೇಕೆದಾಟು ವಿಚಾರ ತಂದು ತಮಿಳುನಾಡು, ಕರ್ನಾಟಕ ನಡುವೆ ಬಿರುಕು ಮೂಡಿಸಿದೆ: ಅಣ್ಣಾಮಲೈ 

ಸೀರೆ ಹಂಚಲು ಯಾವುದೇ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿಲ್ಲದಿರುವುದೇ ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿದೆ. ಸೀರೆ ಹಂಚಿಕೆ ವಿಷ್ಯ ತಿಳಿದು ಒಮ್ಮೆಲೆ ಸಾವಿರಾರು ಮಹಿಳೆಯರು ಮುಗಿಬಿದ್ದ ಪರಿಣಾಮ, ಮಧ್ಯದಲ್ಲಿ ಸಿಲುಕಿದ ತಾಯಿ ಹಾಗೂ ಅಲ್ಲೇ ಇದ್ದ ಮಗು ಹೊರಬರಲಾರದೆ ಕಂಗಾಲಾಗಿ ಹೋದ್ರು. ಮಗುವನ್ನು ಹಿಡಿದಿದ್ದವರು ಕೈಮೇಲೆತ್ತಿ ಮಗು ರಕ್ಷಣೆಗೆ ಮುಂದಾದ್ರು. ಈ ಸನ್ನಿವೇಶ ಒಂದು ಕ್ಷಣ ಭಯದ ವಾತಾವರಣವನ್ನೇ ಮೂಡಿಸಿತ್ತು.

ಅಂತಿಮವಾಗಿ ಗುಂಪಿನಲ್ಲಿ ಸಿಲುಕಿದ್ದವರು ಸೇಫಾಗಿ ಹೊರ ಬಂದಿದ್ದಾರೆ. ಆದರೆ ಇಷ್ಟು ದೊಡ್ಡಮಟ್ಟದ ಕಾರ್ಯಕ್ರಮ ಆಯೋಜನೆ ಮಾಡಿದಾಗ ಆದಷ್ಟು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಕಾರ್ಯಕ್ರದಲ್ಲಿ ಇಂತಹ ಅವಾಂತರ ತಪ್ಪಿದ್ದಲ್ಲ ಅಂತಾನೆ ಹೇಳಬಹುದು. ಇದನ್ನೂ ಓದಿ: ಚಹಾ, ಸಿಗರೇಟ್ ತಂದುಕೊಡುವಂತಹ ರೌಡಿಗಳಿಂದ ನಾನೇನು ಕಲಿಯಬೇಕಿಲ್ಲ: ಯತ್ನಾಳ್

Share This Article
Leave a Comment

Leave a Reply

Your email address will not be published. Required fields are marked *