ವಿಧವೆಗೆ ಪೆಟ್ರೋಲ್ ಬಂಕ್ ಕೊಡಿಸುವುದಾಗಿ 12 ಲಕ್ಷ ರೂ. ನಾಮ

Public TV
1 Min Read

ದಾವಣಗೆರೆ: ಪೆಟ್ರೋಲ್ ಬಂಕ್ ಕೊಡಿಸುವ ಆಮೀಷ ನೀಡಿ ಸ್ತ್ರೀ ಶಕ್ತಿ ಸಂಘದ ಒಕ್ಕೂಟದ ಅಧ್ಯಕ್ಷೆಯೊಬ್ಬಳು ಸದಸ್ಯೆಗೆ ವಂಚನೆ ಮಾಡಿರುವ ಪ್ರಕರಣ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ.

ತಾಲೂಕಿನ ಕಾಕನೂರು ಗ್ರಾಮ ದಿವ್ಯಾ ವಂಚನೆ ಮಾಡಿರುವ ಸ್ತ್ರೀ ಶಕ್ತಿ ಸಂಘದ ಅಧ್ಯಕ್ಷೆ. ದಿವ್ಯಾ ಸಂಘದ ಸದಸ್ಯೆ ಯಕ್ಕೆಗುಂದಿಯ ಪದ್ಮಾವತಿ ಎಂಬವರಿಗೆ ಸುಮಾರು 12 ಲಕ್ಷ ರೂ. ವಂಚಿಸಿದ್ದಾಳೆ ಎನ್ನುವ ಆರೋಪ ಕೇಳಿ ಬರುತ್ತಿದೆ. ದಿವ್ಯಾ ಹಾಗೂ ಪದ್ಮಾವತಿ ಸ್ತ್ರೀ ಶಕ್ತಿ ಸಂಘದ ಪ್ರಮುಖರಾಗಿದ್ದು, ಕಳೆದ ಆರು ವರ್ಷಗಳಿಂದ ಇಬ್ಬರು ಪರಿಚಯಸ್ಥರಾಗಿದ್ದರು. ಈ ವೇಳೆ ದಿವ್ಯಾ, ಪದ್ಮಾವತಿಗೆ ವಿಧವೆಯರಿಗೆ ಸರ್ಕಾರಿಂದ ಸಬ್ಸಿಡಿಯಾಗಿ ಪೆಟ್ರೋಲ್ ಬಂಕ್ ಮಾಡಿಸಿಕೊಡುವುದಾಗಿ ಆಮೀಷ ತೋರಿಸಿದ್ದಾಳೆ.

ಮೋಸ ಹೋದ ಪದ್ಮಾವತಿ

ಪೆಟ್ರೋಲ್ ಬಂಕ್ ಬಂದರೆ ಜೀವನೋಪಾಯಕ್ಕೆ ದಾರಿಯಾಗುತ್ತೆ ಎಂದು ಇದನ್ನು ನಂಬಿದ ಪದ್ಮಾವತಿ ನಿರಂತರವಾಗಿ ಒಟ್ಟು ಬ್ಯಾಂಕ್ ಹಾಗೂ ಮುಂಗಡವಾಗಿ ಒಟ್ಟು ಸುಮಾರು 12 ಲಕ್ಷ ರೂ. ಹಣ ನೀಡಿದ್ದಾರೆ. ಆದರೆ ಒಂದು ವರ್ಷ ಕಳೆದರೂ ಅವರಿಂದ ಯಾವುದೇ ಕೆಲಸವಾಗಿಲ್ಲ. ಪೆಟ್ರೋಲ್ ಬಂಕ್ ಬಗ್ಗೆ ಕೇಳಿದರೆ ಹಾರಿಕೆ ಉತ್ತರ ನೀಡಿ ತಪ್ಪಿಸಿಕೊಂಡಿದ್ದಾಳೆ.

ಪದ್ಮಾವತಿ ಹಣ ವಾಪಸ್ ನೀಡುವಂತೆ ಪಟ್ಟು ಹಿಡಿದಿದ್ದು, ದಿವ್ಯಾ ತಪ್ಪಿಸಿಕೊಂಡು ಓಡಾಡುತ್ತಿದ್ದಾಳೆ. ಅಲ್ಲದೆ, ನೀವೇನಾದರೂ ತೀವ್ರ ಒತ್ತಾಯ ಮಾಡಿದರೆ ನಾನು ಏನಾದರೂ ಮಾಡಿಕೊಳ್ಳುತ್ತೇನೆ. ನಂತರ ಇದಕ್ಕೆ ನೀವೇ ಹೊಣೆಗಾರರು ಎಂದು ಬೆದರಿಕೆ ಹಾಕುತ್ತಿದ್ದಾಳೆ. ಹೀಗಾಗಿ ಪದ್ಮಾವತಿಗೆ ದಿಕ್ಕು ತೋಚದಂತಾಗಿದೆ. ಇದೀಗ ಪದ್ಮಾವತಿ ತಾವು ಕಳೆದುಕೊಂಡಿರುವ ತಮ್ಮ ಹಣ ಕೊಡಿಸುವಂತೆ ಕೋರಿ ಚನ್ನಗಿರಿಯ ಸಂತೆಬೆನ್ನೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

Share This Article
Leave a Comment

Leave a Reply

Your email address will not be published. Required fields are marked *