ವರದಕ್ಷಿಣೆ ಕಿರುಕುಳದಿಂದ ಮನನೊಂದು ಮಹಿಳೆ ನೇಣಿಗೆ ಶರಣು

Public TV
0 Min Read

ದಾವಣಗೆರೆ: ವರದಕ್ಷಿಣೆ ಕಿರುಕುಳದಿಂದಾಗಿ ಮಹಿಳೆಯೊಬ್ಬಳು ಮನನೊಂದು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದಾವಣಗೆರೆಯಲ್ಲಿ ನಡೆದಿದೆ.

ಇಲ್ಲಿನ ಭಾಷಾನಗರದ ಆಫ್ರೀನ್ ಬಾನು ಆತ್ಮಹತ್ಯ ಮಾಡಿಕೊಂಡ ಮಹಿಳೆಯಾಗಿದ್ದಾರೆ. ಅವರು ಮೂರು ವರ್ಷಗಳ ಹಿಂದೆ ಇದ್ರೀಸ್ ಜೊತೆ ವಿವಾಹವಾಗಿದ್ದರು. ಸುಮಾರು ದಿನಗಳಿಂದ ಪತಿ ಮನೆಯವರು ವರದಕ್ಷಿಣೆ ತರುವಂತೆ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದ ಆಫ್ರೀನಾ ನೇಣು ಹಾಕಿಕೊಂಡು ಆತ್ಮಹತ್ಯ ಶರಣಾಗಿದ್ದಾರೆ ಎಂದು ಮೃತರ ಪೋಷಕರು ಆರೋಪಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *