ಮಡಿಕೇರಿ: ಬಸ್ ಅಡಿ ಸಿಲುಕಿಯೂ ಬಚಾವ್ ಆದ ಮಹಿಳೆ- ವೈರಲ್ ಆಗಿದೆ ಗ್ರೇಟ್ ಎಸ್ಕೇಪ್ ವಿಡಿಯೋ

Public TV
1 Min Read

ಮಡಿಕೇರಿ: ಕೆಎಸ್‍ಆರ್‍ಟಿಸಿ ಬಸ್ ಕೆಳಗೆ ಸಿಲುಕಿದ್ರೂ ಪವಾಡ ಸದೃಶವಾಗಿ ಮಹಿಳೆ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿಯಲ್ಲಿ ನಡೆದಿದೆ.

ಸೋಮವಾರಪೇಟೆ ತಾಲೂಕಿನ ಕುಶಾಲನಗರ ಸಮೀಪದ ಗುಡ್ಡೆಹೊಸೂರು ಬಳಿಯ ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಈ ಅಪಘಾತ ನಡೆದಿದ್ದು, ಘೋರ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ರಸ್ತೆಯಲ್ಲಿ ಬೈಕ್ ಸವಾರನೊಬ್ಬ ಇದ್ದಕ್ಕಿದ್ದಂತೆ ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಯತ್ತ ಬೈಕ್ ತಿರುಗಿಸಿದ್ಧಾನೆ. ಈ ವೇಳೆ ಹಿಂದೆ ಬರುತ್ತಿದ್ದ ಕೆಎಸ್‍ಆರ್‍ಟಿಸಿ ಬಸ್ ಬೈಕಿಗೆ ಡಿಕ್ಕಿ ಹೊಡೆಯೋದನ್ನ ತಪ್ಪಿಸಲು ಚಾಲಕ ಬಸ್ಸನ್ನು ಎಡಕ್ಕೆ ತಿರುಗಿಸಿದ್ದಾರೆ. ಈ ವೇಳೆ ಬಸ್ ಗೆ ಬೈಕ್ ಟಚ್ ಆಗಿ ಬೈಕ್ ಸವಾರ ದೂರಕ್ಕೆ ಹಾರಿಬಿದ್ದಿದ್ದಾನೆ. ಇತ್ತ ಬೈಕ್ ಹಿಂಬದಿ ಕುಳಿತಿದ್ದ ಮಹಿಳೆ ಬಸ್‍ನ ಎರಡು ಚಕ್ರದ ನಡುವೆ ಸಿಲುಕಿದ್ದಾರೆ. ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ ಕೂಡಲೇ ಬಸ್ ನಿಲ್ಲಿಸಿದ್ದಾರೆ. ಹೀಗಾಗಿ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಆದ್ರೆ ವೇಗದ ತೀವ್ರತೆಗೆ ಸರ್ಕಾರಿ ಬಸ್ ಉಲ್ಟಾ ತಿರುಗಿ ರಸ್ತೆಗೆ ಅಡ್ಡಲಾಗಿ ನಿಂತಿದೆ.

ಅದೃಷ್ಟವಶಾತ್ ಬಸ್ಸಿನಲ್ಲಿದ್ದವರು ಹಾಗೂ ಬೈಕ್ ಸವಾರರಿಗ್ಯಾರಿಗೂ ಯಾವುದೇ ತೊಂದರೆ ಆಗಿಲ್ಲ. ಅಪಘಾತದ ವಿಡಿಯೋ ಮಾತ್ರ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

https://www.youtube.com/watch?v=f5KpV1MzHLU&feature=youtu.be

Share This Article
Leave a Comment

Leave a Reply

Your email address will not be published. Required fields are marked *