ಕೆಲಸದ ನೆಪದಲ್ಲಿ ಕರೆದೊಯ್ದು ಕಾರಿನಲ್ಲಿ ಕಿರುಕುಳ- ಬೈಕಲ್ಲಿ ಬಂದವ್ರಿಂದ ಮಹಿಳೆ ರಕ್ಷಣೆ

Public TV
1 Min Read

ಮಂಗಳೂರು: ಕೆಲಸ ಕೊಡಿಸುವ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ (Sexual harassment) ನೀಡಿರುವ ಆರೋಪವೊಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ (Belthangady) ತಾಲೂಕಿನ ಉಜಿರೆಯಲ್ಲಿ ನಡೆದಿದೆ.

ಮಹಾವೀರ ಟೆಕ್ಸ್ ಟೈಲ್ ಹಾಗೂ ಮಹಾವೀರ ಸೂಪರ್ ಮಾರ್ಕೆಟ್ ಮಾಲೀಕ ಪ್ರಭಾಕರ್ ಹೆಗ್ಡೆ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಪ್ರಭಾಕರ್ ಹೆಗ್ಡೆಯು 20 ವರ್ಷದ ವಿವಾಹಿತ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಲಾಗಿದೆ. ಕಾರಿನಲ್ಲಿ ಕಿರುಕುಳ ನೀಡುವಾಗ ಮಹಿಳೆ ಜೋರಾಗಿ ಕಿರುಚಾಡಿದ್ದಾರೆ. ಈ ವೇಳೆ ಬೈಕ್ ನಲ್ಲಿ ಬಂದ ಯುವರು ಮಹಿಳೆಯನ್ನು ರಕ್ಷಣೆ ಮಾಡಿದ್ದಾರೆ.

ಹೆಗ್ಡೆ ತನ್ನ ಸೂಪರ್ ಮಾರ್ಕೆಟ್‍ (Super Market) ನ ಬಿಲ್ಲಿಂಗ್ ತೋರಿಸೋದಾಗಿ ಕಾರಿನಲ್ಲಿ ಕರೆದೊಯ್ದು, ಮೈಗೆ ಕೈ ಹಾಕಿ ಲೈಂಗಿಕ ಕಿರಿಕುಳ ನೀಡಿರುವುದಾಗಿ ಮಹಿಳೆ ಮತ್ತು ಆಕೆಯ ಗಂಡ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇತ್ತ ದೂರು ದಾಖಲಾಗುತ್ತಿದ್ದಂತೆಯೇ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಇದನ್ನೂ ಓದಿ: ಶೂಟಿಂಗ್ ವೇಳೆ ಸಾಹಸ ನಿರ್ದೇಶಕ ರವಿವರ್ಮಗೆ ಗಾಯ

Share This Article