ಚೈನ್ ಕೀಳಲು ಬಿಡದಿದ್ದಕ್ಕೆ ಕೆರೆಗೆ ತಳ್ಳಿದ ಕಳ್ಳ- ಮಹಿಳೆ ಸಾವು

Public TV
1 Min Read

ಹಾಸನ: ಚೈನ್ ಕೀಳಲು ಬಿಡದಿದ್ದಕ್ಕೆ ಮಹಿಳೆಯನ್ನು ಖದೀಮನೊಬ್ಬ ಕೆರೆಗೆ ತಳ್ಳಿದ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.

ನೀಲ (50) ಮೃತ ಮಹಿಳೆ. ಹಾಸನ ನಗರದ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ಕಾಲು ದಾರಿಯಲ್ಲಿ ಮನೆಗೆ ಬರುವ ವೇಳೆ ಈ ಘಟನೆ ನಡೆದಿದೆ.

ನೀಲ ಅವರು ಮನೆಗೆ ನಡೆದುಕೊಂಡು ಹೋಗುತ್ತಿದ್ದ ಸಂದರ್ಭದಲ್ಲಿ ಕಳ್ಳನೊಬ್ಬ ಮಾಂಗಲ್ಯ ಸರ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ನೀಲ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಿತ್ತುಕೊಂಡು ಹೋಗಲು ಬಿಡದಿದ್ದಾಗ ಆತ ಪಕ್ಕದಲ್ಲಿಯೇ ಇದ್ದ ಕೆರೆಗೆ ತಳ್ಳಿದ್ದಾನೆ. ಇದನ್ನೂ ಓದಿ: ಕಾವೇರಿ ನದಿಯಲ್ಲಿ ಅಕ್ರಮ ಮರಳುಗಾರಿಕೆ- ಲಾರಿಯನ್ನು ಪೊಲೀಸರಿಗೆ ಒಪ್ಪಿಸಿದ ಗ್ರಾಮಸ್ಥರು

ಕೆರೆಗೆ ಬಿದ್ದ ನೀಲ ಅವರು ಈಜಬಾರದೆ ಮೃತಪಟ್ಟಿದ್ದಾರೆ. ಇತ್ತ ವಿಷಯ ಗೊತ್ತಾಗುತ್ತಿದ್ದಂತೆಯೇ ಸ್ಥಳೀಯರು ಖದೀಮನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಸ್ಥಳಕ್ಕೆ ಎಸ್‍ಪಿ ಶ್ರೀನಿವಾಸ್‍ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಬಡಾವಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Live Tv

Share This Article
Leave a Comment

Leave a Reply

Your email address will not be published. Required fields are marked *