ದೂಡಿದ್ದಕ್ಕೆ ಬಿತ್ತು ಪೆಟ್ಟು – ಸೀಟಿಗಾಗಿ ಅಲ್ಲ ಈಗ ಬಸ್ಸು ಹತ್ತಲು ಮಹಿಳೆಯರ ಜಗಳ!

Public TV
1 Min Read

ತುಮಕೂರು: ರಾಜ್ಯದ್ಯಂತ ಕರ್ನಾಟಕದ ಮಹಿಳೆಯರಿಗೆ ಉಚಿತ ಪ್ರಯಾಣದ (Free Bus Rides Across Karnataka) ಪರಿಣಾಮ ಬಸ್ಸಿನಲ್ಲಿ ಹಿಂದೆ ಸೀಟ್‌ಗಾಗಿ ಜಗಳ ನಡೆದಿತ್ತು. ಆದರೆ ಈಗ ಪಾವಗಡದಲ್ಲಿ (Pavagada) ಬಸ್ಸು ಹತ್ತಲು ಮಹಿಳೆಯರು ಜಗಳ ಮಾಡಿದ್ದಾರೆ.

ಪಾವಗಡ ಶನಿಮಹಾತ್ಮ ದೇವಸ್ಥಾನಕ್ಕೆ ಶನಿವಾರ, ಭಾನುವಾರ ಚಿತ್ರದುರ್ಗ, ಚಳ್ಳಕೆರೆ, ಹಿಂದೂಪುರ, ಮಡಕಶಿರದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಾರೆ. ಇದನ್ನೂ ಓದಿ: Ghaziabad| ಏರ್‌ ಇಂಡಿಯಾ ಟೇಕಾಫ್‌ ವೇಳೆ ತಾಂತ್ರಿಕ ದೋಷ – ತಪ್ಪಿದ ಅನಾಹುತ

 

 

 

View this post on Instagram

 

A post shared by PUBLiC TV (@publictv)

 

ದೇವಸ್ಥಾನದಲ್ಲಿ ಪೂಜೆ ಮುಗಿಸಿದ ನಂತರ ಬಸ್ಸು ಹತ್ತಲು ಮಹಿಳೆಯರು ಮುಗಿಬಿದ್ದಿದ್ದಾರೆ. ಬಹುತೇಕ ಬಸ್ಸುಗಳು ರಶ್‌ ಇದ್ದ ಕಾರಣ ಮಹಿಳೆಯರು ಸಿಕ್ಕಿದ ಬಸ್ಸು ಹತ್ತಲು ಮುಂದಾಗಿದ್ದಾರೆ. ಈ ವೇಳೆ ಒಬ್ಬರನ್ನು ತಳ್ಳಿ ಮತ್ತೊಬ್ಬರು ಹತ್ತಲು ಪೈಪೋಟಿ ನಡೆಸಿದ್ದಾರೆ.

ಬಸ್ ಬಂದ ಕೂಡಲೇ ಸೀಟ್ ಹಿಡಿಯಲು ನಾನು ಮುಂದು ತಾ ಮುಂದು ಮಹಿಳೆ ಬಸ್ಸು ಹತ್ತಿದ್ದಾರೆ. ಈ ವೇಳೆ ಮಹಿಳೆಯೊಬ್ಬಳು ಮತ್ತೊಬ್ಬ ಮಹಿಳೆಗೆ ಹೊಡೆದಿದ್ದಾರೆ. ಮಹಿಳೆಯರು ಬಸ್ಸು ಹತ್ತಲು ಜಗಳ ಮಾಡುತ್ತಿರುವ ವಿಡಿಯೋ ಮೊಬೈಲ್‌ ಕ್ಯಾಮೆರಾದಲ್ಲಿ ಸೆರೆಯಾಗಿದೆ.

Share This Article