ಫೇಸ್‌ಬುಕ್‌ ಯುವಕನಿಗಾಗಿ ಊರು ಬಿಟ್ಟು ಬಂದಿದ್ದಾಕೆ ಶವವಾಗಿ ಪತ್ತೆ – ತಂತಿಯಿಂದ ಬಿಗಿದು ಉಸಿರುಗಟ್ಟಿಸಿ ಮಹಿಳೆ ಕೊಲೆ?

Public TV
1 Min Read

ಹಾಸನ: ಫೇಸ್‌ಬುಕ್‌ನಲ್ಲಿ (FaceBook) ಪರಿಚಯವಾದ ಯುವಕನಿಗಾಗಿ ಬೆಂಗಳೂರು ಬಿಟ್ಟು ಹಾಸನಕ್ಕೆ ಬಂದಿದ್ದವಳು ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಹಾಸನ (Hassan) ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ.

ಬೆಂಗಳೂರಿನ (Bengaluru) ವಿಜಯನಗರದ ಸಿರಿಸ್‌ ಅಲಿಯಾಸ್‌ ಸಿರಿ (23) ಮೃತಪಟ್ಟವಳು. ಈಕೆಗೆ ಕಟ್ಟಾಯ ಹೋಬಳಿಯ ಮಾರನಾಯಕನಹಳ್ಳಿ ಗ್ರಾಮದ ಆದರ್ಶ್‌ (26) ಎಂಬಾತನ ಜೊತೆ ಫೇಸ್‌ಬುಕ್‌ನಲ್ಲಿ ಪರಿಚಯವಾಗಿತ್ತು. ನಂತರ ಇಬ್ಬರೂ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದರು. ಹಾಸನದ ಗುಡ್ಡೇನಹಳ್ಳಿಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರೂ ಲಿವಿಂಗ್‌ ಟುಗೆದರ್‌ ರಿಲೇಷನ್‌ಶಿಪ್‌ನಲ್ಲಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕಾರು ಗ್ಯಾರೇಜ್‍ನಲ್ಲಿ ನೋಡನೋಡ್ತಿದ್ದಂತೆ 3ಕ್ಕೂ ಹೆಚ್ಚು ವಾಹನಗಳು ಧಗಧಗ

ಈ ಮೊದಲು ಸಿರಿಸ್‌ ಬೆಂಗಳೂರಿನಲ್ಲೇ ಕಂಪನಿಯೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಈ ವೇಳೆ ಆದರ್ಶ್‌ ಪರಿಚಯವಾಗಿದೆ. ಬಳಿಕ ಆಕೆ ಬೆಂಗಳೂರು ಬಿಟ್ಟು ಹಾಸನಕ್ಕೆ ಬಂದಿದ್ದಾಳೆ. ನಂತರ ಇಬ್ಬರೂ ಪೆಟ್ರೋಲ್‌ ಬಂಕ್‌ವೊಂದರಲ್ಲಿ ಕೆಲಸ ಮಾಡಿಕೊಂಡಿದ್ದರು. ಇವರು ಮದುವೆಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಹೀಗಾಗಿ ಲಿವಿಂಗ್‌ ಟುಗೆದರ್‌ನಲ್ಲಿದ್ದರು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಸಿರಿಸ್‌ನ್ನು ಕೊಲೆ ಮಾಡಿ ಮನೆಗೆ ಬೀಗ ಹಾಕಿಕೊಂಡು ಆದರ್ಶ್‌ ಪರಾರಿಯಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಶ್ವಾನ ದಳ, ಎ‌ಎಸ್‌ಪಿ ತಮ್ಮಯ್ಯ, ಡಿವೈಎಸ್‌ಪಿ ಉದಯ್‌ಭಾಸ್ಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪೆನ್‌ಷನ್‌ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *