ಮನೆಯಲ್ಲಿ ಒಂಟಿಯಾಗಿದ್ದಾಗ ಮಹಿಳೆ ಕೊಲೆ

Public TV
1 Min Read

ಬೆಂಗಳೂರು: ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಯೊಂದು ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಕಿತ್ತಾಗನಹಳ್ಳಿಯಲ್ಲಿ ನಡೆದಿದೆ.

ಸುನತಿ ದಾಸ್ (35) ಮೃತ ಮಹಿಳೆ. ಸುನತಿ ಮೂಲತಃ ಪಶ್ಚಿಮ ಬಂಗಾಳದವಳಾಗಿದ್ದು, ಕಳೆದ ಎರಡು ವರ್ಷಗಳ ಹಿಂದೆ ಕೆಲಸ ಹರಸಿ ಬೆಂಗಳೂರಿಗೆ ಬಂದಿದ್ದಳು. ಸುನತಿ ಒಂಟಿಯಾಗಿದ್ದಾಗ ದುಷ್ಕರ್ಮಿಗಳು ಅತ್ಯಾಚಾರ ನಡೆಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಶಂಕಿಸುತ್ತಿದ್ದಾರೆ.

ದುಷ್ಕರ್ಮಿಗಳು ಮಹಿಳೆಯನ್ನು ಕೊಲೆ ಮಾಡಿ ಹೊರಗಿನಿಂದ ಮನೆ ಬೀಗ ಹಾಕಿಕೊಂಡು ಹೋಗಿದ್ದಾರೆ. ಈ ವೇಳೆ ಸುತ್ತಮುತ್ತಲಿನ ನಿವಾಸಿಗಳಿಗೆ ಮೃತದೇಹದ ವಾಸನೆ ಬಂದಿದ್ದು, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕಳೆದ ಮೂರು ದಿನಗಳ ಹಿಂದೆ ಈ ಕೊಲೆ ನಡೆದಿರಬಹುದು ಎಂದು ಹೇಳಲಾಗುತ್ತಿದೆ.

ಈ ವಿಷಯ ತಿಳಿದ ತಕ್ಷಣ ಸೂರ್ಯಸಿಟಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಮಹಿಳೆಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಬಗ್ಗೆ ಸೂರ್ಯಸಿಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *