ಈರುಳ್ಳಿ ಹಾರ ಧರಿಸಿ ಪ್ರತಿಭಟಿಸಿದ ಧಾರವಾಡದ ಮಹಿಳೆಯರು

Public TV
1 Min Read

ಧಾರವಾಡ: ದೇಶದಲ್ಲಿ ಬೆಲೆ ಏರಿಕೆ ನಿಯಂತ್ರಣ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಧಾರವಾಡದಲ್ಲಿ ಮಹಿಳಾ ಕಾಂಗ್ರೆಸ್ ಕಾರ್ಯಕರ್ತರು, ಈರುಳ್ಳಿ ಹಾರ ಹಾಕಿಕೊಂಡು ವಿನೂತನವಾಗಿ ಪ್ರತಿಭಟಿಸಿದರು.

ನಗರದ ವಿವೇಕಾನಂದ ವೃತ್ತದಲ್ಲಿ ಖಾಲಿ ಸಿಲಿಂಡರ್ ಇಟ್ಟುಕೊಂಡು, ಕೊರಳಲ್ಲಿ ಈರುಳ್ಳಿ ಹಾರ ಹಾಕಿಕೊಂಡು ಕುಳಿತು ಪ್ರತಿಭಟನೆ ನಡೆಸಲಾಯ್ತು. ಈರುಳ್ಳಿ ಬೆಲೆ ಏರಿಕೆಯಿಂದ ಜನಸಾಮಾನ್ಯರ ಬದುಕು ಹೈರಾಣಾಗಿ ಹೋಗಿದೆ. ಕೇಂದ್ರ ಸರ್ಕಾರ ಈ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಮತ್ತೊಂದೆಡೆ ಉಜ್ವಲಾ ಯೋಜನೆಯಡಿಯಲ್ಲಿ ಸಿಲಿಂಡರ್ ಪಡೆದ ಬಡವರಗೆ ಕಳೆದ ಮೂರು ವರ್ಷಗಳಿಂದ ಸಬ್ಸಿಡಿ ನೀಡದೇ ಅನ್ಯಾಯ ಮಾಡಲಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ ಕಾರ್ಯಕರ್ತರು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಇನ್ನು ಇದೇ ವೇಳೆ ಮಹಿಳಾ ಕಾರ್ಯಕರ್ತೆಯರ ಪ್ರತಿಭಟನೆಗೆ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು

Share This Article
Leave a Comment

Leave a Reply

Your email address will not be published. Required fields are marked *