`ಕಬ್ಬನ್ ಪಾರ್ಕ್ ಉಳಿಸಿ’ ಸಿಎಂಗೆ ಪತ್ರ ಬರೆದು ಮನವಿ

Public TV
1 Min Read

ಬೆಂಗಳೂರು: ಕಬ್ಬನ್ ಪಾರ್ಕ್ (Cubbon Park) ಹಾಗೂ ಲಾಲ್ ಬಾಗ್ (Lalbagh) ಬೆಂಗಳೂರು (Bengaluru) ಹಸಿರಿನ ಹಾಟ್ ಸ್ಪಾಟ್. ಆದ್ರೆ ಈಗ ಕಬ್ಬನ್ ಪಾರ್ಕ್ ವೈಶಿಷ್ಟ್ಯಕ್ಕೆ ಧಕ್ಕೆ ತರುವ ಕೆಲಸ ಸರ್ಕಾರದ ಇಲಾಖೆಯೊಂದರಿಂದ ಆಗುತ್ತಿದೆ. ಹೀಗಾಗಿ ಖುದ್ದು ಸಿಎಂ ಬಸವರಾಜ ಬೊಮ್ಮಾಯಿಗೆ (Basavaraj Bommai) ಪತ್ರ ಬರೆಯಲಾಗಿದೆ.

ಕಬ್ಬನ್ ಪಾರ್ಕ್ ಬೆಂಗಳೂರಿನ ವಾಯುವಿಹಾರಿಗಳ ಪಾಲಿಗೆ ಸ್ವರ್ಗ. ಹಸಿರ ರಾಶಿಯನ್ನೇ ಹೊದ್ದಿರುವ ಕಬ್ಬನ್ ಪಾರ್ಕ್ ಬೆಂಗಳೂರಿನ ಸೌಂದರ್ಯಕ್ಕೆ ಕಲಶವಿದ್ದಂತೆ. ಅಂದ ಹಾಗೆ ಇದೇ ಕಬ್ಬನ್ ಪಾರ್ಕ್ ವ್ಯಾಪ್ತಿಯಲ್ಲಿ ಲೋಕೋಪಯೋಗಿ ಇಲಾಖೆ ಇದೆ. ಈಗ ಈ ಇಲಾಖೆಯವರು, ಇಲ್ಲಿ ಶಾಪ್, ಹೋಟೆಲ್, ವಾಣಿಜ್ಯ ಮಳಿಗೆಗಳ ನಿರ್ಮಾಣಕ್ಕೆ ಟೆಂಡರ್ ಕರೆದಿದ್ದಾರೆ. ಇದು ಈಗ ಹೊಸ ವಿವಾದಕ್ಕೆ ಕಾರಣವಾಗಿದೆ. ಇದನ್ನೂ ಓದಿ: ಬಾಡಿಗೆ ಮನೆಗೆ ಅಡ್ವಾನ್ಸ್ ಕೊಡೋ ಮುನ್ನ ಹುಷಾರ್ – ಹಣದ ಜೊತೆಗೆ ಓನರ್ ಎಸ್ಕೇಪ್

ಕಬ್ಬನ್ ಪಾರ್ಕ್‍ಗೆ ಹೊಂದಿಕೊಂಡಂತೆ ಇರುವ ಲೋಕೋಪಯೋಗಿ ಇಲಾಖೆ ಈ ರೀತಿ ವಾಣಿಜ್ಯ ಚಟುವಟಿಕೆಗಳನ್ನು ಅರಂಭಿಸಲು ಮುಂದಾಗಿದೆ. ಆದ್ರೆ ಇದ್ರಿಂದ ಪಾರ್ಕ್ ಸೌಂದರ್ಯಕ್ಕೆ ಧಕ್ಕೆಯಾಗುತ್ತೆ. ಹೀಗಾಗಿ ಈ ಟೆಂಡರ್ ಪ್ರಕ್ರಿಯೆ ರದ್ದುಗೊಳಿಸಬೇಕು. ಕಬ್ಬನ್ ಪಾರ್ಕ್‍ಗೆ ಇದ್ರಿಂದ ತೊಂದರೆಯಾಗುತ್ತೆ ಎಂದು ಸಿಎಂ ಬೊಮ್ಮಾಯಿಗೆ ಸಾಮಾಜಿಕ ಕಾರ್ಯಕರ್ತರೊಬ್ಬರು ಪತ್ರ ಬರೆದಿದ್ದಾರೆ. ಇದನ್ನೂ ಓದಿ: ಸಾಕ್ಷ್ಯಚಿತ್ರ ಭಾರತದಲ್ಲಿ ಬ್ಯಾನ್‌ – ಬಿಬಿಸಿ ವಿರುದ್ಧ 302 ಅಧಿಕಾರಿಗಳು ಆಕ್ರೋಶ

ಈ ಹಿಂದೆ ಕಬ್ಬನ್ ಪಾರ್ಕ್ ಆವರಣದೊಳಗೆ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶ ನೀಡೋ ವಿಚಾರದಲ್ಲಿ ದೊಡ್ಡ ಮಟ್ಟದ ಗಲಾಟೆ ಸೃಷ್ಟಿಯಾಗಿತ್ತು. ಈಗ ವಾಣಿಜ್ಯ ಮಳಿಗೆಗಳ ನಿರ್ಮಾಣ ವಿಚಾರ ಸಿಎಂ ಅಂಗಳಕ್ಕೆ ತಲುಪಿದ್ದು, ಏನಾಗುತ್ತೆ ಕಾದು ನೋಡಬೇಕು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *