ಬಿಸಿಯೂಟ ತಡವಾಗಿ ಮಾಡಿದಕ್ಕೆ ಮಾರಣಾಂತಿಕ ಹಲ್ಲೆಗೈದ ಅಧ್ಯಕ್ಷ

Public TV
1 Min Read

ಯಾದಗಿರಿ: ಮಧ್ಯಾಹ್ನದ ಬಿಸಿಯೂಟದ ತಡವಾಗಿ ಮಾಡಿದಕ್ಕೆ ಸಿಬ್ಬಂದಿ ಮೇಲೆ ಶಾಲೆಯ ಎಸ್‍ಡಿಎಂಸಿ ಅಧ್ಯಕ್ಷ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಪುರ ತಾಲೂಕಿನ ಗುಂಡಾಪುರ ದಲ್ಲಿ ನಡೆದಿದೆ.

ಈ ಘಟನೆ ಶನಿವಾರ ಗುಂಡಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದ್ದು, ಎಸ್‍ಡಿಎಂಸಿ ಅಧ್ಯಕ್ಷ ಭೀಮಣ್ಣ ಈ ಕೃತ್ಯ ಎಸೆಗಿದ್ದಾನೆ. ಶನಿವಾರ ಮಧ್ಯಾಹ್ನ ಅಡುಗೆ ಮಾಡುವುದು ತಡವಾಗಿತ್ತು. ಈ ಕಾರಣದಿಂದ ಬಿಸಿಯೂಟ ಮಾಡುವ ಸಿಬ್ಬಂದಿ ಮತ್ತು ಎಸ್‍ಡಿಎಂಸಿ ಸದಸ್ಯರ ಮಧ್ಯೆ ಗಲಾಟೆಯಾಗಿತ್ತು.

ಈ ವಿಚಾರವನ್ನೇ ಮನಸ್ಸಿನಲ್ಲಿ ಇಟ್ಟುಕೊಂಡಿದ್ದ ಭೀಮಣ್ಣ ತಡರಾತ್ರಿ ಗುಂಪು ಕಟ್ಟಿಕೊಂಡು ಅಡುಗೆ ಮಾಡುವ ಕಮಲಬಾಯಿ ಮನೆಗೆ ತೆರಳಿದ್ದಾನೆ. ಈ ವೇಳೆ ಮಾತಿಗೆ ಮಾತು ಬೆಳೆದು ಕಮಲಬಾಯಿ ಕುಟುಂಬಸ್ಥರ ಮೇಲೆ ಭೀಮಣ್ಣ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ಈ ಘಟನೆಯಲ್ಲಿ ಕಮಲಬಾಯಿ ಪತಿಗೆ ಗಂಭೀರ ಗಾಯವಾಗಿದ್ದು, ಕಲಬುರಗಿ ಜಿಲ್ಲಾಸ್ಪತ್ರೆಯಲ್ಲಿ ಕಮಲಬಾಯಿ ಕುಟುಂಬಸ್ಥರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸಂಬಂಧ ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *